Saturday, January 31, 2026

ಪೊಲೀಸ್ ವಸತಿಗೃಹವಾಗಿ ಪರಿವರ್ತನೆಗೊಂಡ ಪಾಳು ಬಿದ್ದ ಕಟ್ಟಡ ಕೆಎಸ್‌ಆರ್‌ಪಿ ಸಿಬ್ಬಂದಿಗೆ ಉಳಿದುಕೊಳ್ಳಲು ಶಾಶ್ವತ ನೆಲೆ ಕಲ್ಪಿಸಿದ ಬಂಟ್ವಾಳ ಪೊಲೀಸರು

 

ಬಂಟ್ವಾಳ: ಮಾ.17 ಇಚ್ಛಾಶಕ್ತಿ ಇದ್ದರೆ ಯಾವುದೇ ಕಾರ್ಯ ಅಸಾಧ್ಯವಲ್ಲ ಎಂಬುದನ್ನು ಬಂಟ್ವಾಳ ಪೊಲೀಸ್ ಇಲಾಖೆ ತೋರಿಸಿ ಕೊಟ್ಟಿದೆ. ಮೊನ್ನೆ ಮೊನ್ನೆವರೆಗೂ ಪಾಳು ಬಿದ್ದು ಯಾರೂ ಹತ್ತಿರ ಹೋಗದ ಸ್ಥಿತಿಯಲ್ಲಿದ್ದ ಪಾಳು ಬಿದ್ದ ಕಟ್ಟಡವೊಂದು ಇದೀಗ ಪೊಲೀಸ್ ವಸತಿ ಗೃಹವಾಗಿ ಪರಿವರ್ತನೆಗೊಂಡಿದೆ. ಪಾಣೆಮಂಗಳೂರು ಗೂಡಿನಬಳಿಯ ಪಶು ಇಲಾಖೆಯ ಹಳೆ ಕಟ್ಟಡದ ನಿವೇಶವನ್ನು ಬಂಟ್ವಾಳ ಸಂಚಾರಿ ಠಾಣೆಗೆ ಹಸ್ತಾಂತರಿಸಲಾಗಿತ್ತು. ಆದರೆ ಅಲ್ಲಿ ಠಾಣೆಗೆ ಬೇಕಾದಷ್ಟು ಜಾಗ ಸಿಗದ ಹಿನ್ನೆಲೆಯಲ್ಲಿ ಪಶು ಇಲಾಖೆಯ ಹಳೆ ಕಟ್ಟಡ ಪಾಳು ಬಿದ್ದ ಸ್ಥಿತಿಯಲ್ಲಿತ್ತು. ಆದರೆ ಇದೀಗ ಆ ಕಟ್ಟಡವನ್ನು ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಳಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರು ರಿಬ್ಬನ್ ಕತ್ತರಿಸಿ ನವೀಕೃತ ವಸತಿ ಗೃಹವನ್ನು ಉದ್ಘಾಟಿಸಿದರು. ಇದಕ್ಕೂ ಮೊದಲು ಗಣಹೋಮ ನೆರವೇರಿಸಲಾಗಿತ್ತು. ಈ ಸಂದರ್ಭದಲ್ಲಿ ನಗರ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಅವಿನಾಶ್, ಗ್ರಾಮಾಂತರ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಪ್ರಸನ್ನ, ಸಂಚಾರಿ ಠಾಣೆಯ ಸಬ್‌ ಇನ್ಸ್ ಪೆಕ್ಟರ್ ರಾಜೇಶ್ ಕೆ.ವಿ, ಅಪರಾಧ ವಿಭಾಗದ ಸಬ್‌ ಇನ್ಸ್ ಪೆಕ್ಟರ್ ಕಲೈಮಾರ್ ಹಾಗೂ ಮೂರು ಠಾಣೆಗಳ ಸಿಬ್ಬಂದಿ ಉಪಸ್ಥಿತರಿದ್ದರು.

 

ಪ್ರಸ್ತುತ ಈ ಕಟ್ಟಡದಲ್ಲಿ ಕೆಎಸ್‌ಆರ್‌ಪಿಯ ಸಿಬಂದಿ ಉಳಿದುಕೊಳ್ಳಲಿದ್ದಾರೆ. ಬಂಟ್ವಾಳ ನಗರ ಠಾಣೆಯ ವ್ಯಾಪ್ತಿಯ ಸುಮಾರು 50ರಷ್ಟು ಕೆಎಸ್‌ಆರ್‌ಪಿಸಿ ಸಿಬ್ಬಂದಿ ನಿತ್ಯ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹಿಂದೆ ಅವರು ಶಾಲೆಗಳು, ಮದುವೆ ಹಾಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದರು. ಆದರೆ ಅಲ್ಲಿ ಮದುವೆ, ಇನ್ನಿತರ ಸಮಾರಂಭ ಇದ್ದಾಗ ಎದ್ದು ಹೋಗಬೇಕಿತ್ತು. ಹೀಗಾಗಿ ಅವರಿಗೆ ಶಾಶ್ವತ ನೆಲೆ ಇರಲಿಲ್ಲ. ಇದೀಗ ಈ ಕಟ್ಟಡ ನವೀಕರಣಗೊಳ್ಳುವ ಮೂಲಕ ಕೆಎಸ್‌ಆರ್‌ಪಿ ಸಿಬಂದಿಗೆ ಶಾಶ್ವತ ನೆಲೆ ಸಿಕ್ಕಂತಾಗಿದೆ. ಕೆಎಸ್‌ಆರ್‌ಪಿಯ ಬಸ್ಸು ನಿಲ್ಲಿಸುವುದಕ್ಕೂ ಇಲ್ಲಿ ಸ್ಥಳಾವಕಾಶವಿದ್ದು, ವಿದ್ಯುತ್, ಶೌಚಾಲಯ, ಅಡುಗೆ ಕೋಣೆ ಹೀಗೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...