Friday, January 30, 2026

ಪೋಲೀಸ್ ಕ್ರೀಡಾ ಕೂಟದಲ್ಲಿ ಚಾಂಪಿಯನ್ ಆಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯ ವನಿತಾ ಬಂಟ್ವಾಳ ವೃತ್ತಕ್ಕೆ ಎರಡು ಪ್ರಥಮ ಬಹುಮಾನ

ಬಂಟ್ವಾಳ: ಮಾ.17 ಜಿಲ್ಲಾ ಪೊಲೀಸ್ ಇಲಾಖೆ ಯ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಮಂಗಳೂರು ಪೊಲೀಸ್ ಕ್ರೀಡಾಂಗಣದಲ್ಲಿ ನಡೆಯಿತು. ವಿವಿಧ ಆಟೋಟಗಳು ನಡೆದು ಪುರುಷರ ವಿಭಾಗದ ಚಾಂಪಿಯನ್ ಆಗಿ ಜಿಲ್ಲಾ ಪೊಲೀಸ್ ನ ರಾಧಕೃಷ್ಣ ಗೌಡ, ಮಹಿಳಾ ವಿಭಾಗದಲ್ಲಿ ವನೀತಾ ಅವರು ಪ್ರಶಸ್ತಿ ಪಡೆದರು. ತಂಡ ಪ್ರಶಸ್ತಿ ಡಿ.ಎ.ಆರ್/ಡಿ.ಪಿ.ಓ ತಂಡದ ಪಾಲಾಯಿತು.

  

 

ಸಮಾರೋಪ ಸಮಾರಂಭದಲ್ಲಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ವಿಜೇತರಿಗೆ ಬಹುಮಾನ ವಿತರಿಸಿದರು.

ಡಿ.ಎ.ಆರ್ ಘಟಕದ ಪೊಲೀಸ್ ನಿರೀಕ್ಷಕರಾದ ನಾರಾಯಣ ಪೂಜಾರಿ,ಜಿಲ್ಲೆಯ ಪೊಲೀಸ್ ಉಪಾಧಿಕ್ಷಕರುಗಳು, ನಿರೀಕ್ಷಕರುಗಳು, ಉಪ ನಿರೀಕ್ಷಕರುಗಳು ಉಪಸ್ಥಿತರಿದ್ದರು. ಸಮಾರೋಪ ಸಭೆಯ ನಂತರ ಮನರಂಜನೆಗಾಗಿ ಪೊಲೀಸ್ ಸಿಬ್ಬಂದಿಗಳಿಂದ ಕೊರೊನಾ ವಾರಿಯರ್ಸ್, ಕರ್ನಾಟಕ ವೈಭವ, ಶ್ವೇತಾ ಕುಮಾರ ಛದ್ಮವೇಶ ನಡೆಯಿತು..ಡಿ.ಎ.ಆರ್ ತಂಡವು ಪ್ರಸ್ತುತ ಪಡಿಸಿದ ಕೊರೊನಾ ವಾರಿಯರ್ಸ್ ನ ಕೊರೊನಾಕ್ಕೆ ಧರ್ಮವಿಲ್ಲ ಎಂಬ ಉತ್ತಮ ಸಂದೇಶ ನೀಡಿದ ಛದ್ಮವೇಷ ಸೇರಿದವರ ವಿಶೇಷ ಪ್ರಶಂಸೆ ಗೆ ಪಾತ್ರವಾಯಿತು. ಛದ್ಮವೇಶ ಸ್ಪರ್ಧಾ ಕಾರ್ಯಕ್ರಮವನ್ನು ಖುದ್ದಾಗಿ ವೀಕ್ಷಿಸಿ ದ ಜಿಲ್ಲಾ ಪೋಲೀಸ್ ಅಧೀಕ್ಷಕರು ನಗದು ಬಹುಮಾನ ನೀಡಿ ಪ್ರೋತ್ಸಾಹ ನೀಡಿದ್ದಾರೆ.

ಬಂಟ್ವಾಳ ವೃತ್ತಕ್ಕೆ ಎರಡು ಪ್ರಥಮ ಬಹುಮಾನ

ಬಂಟ್ವಾಳ ವೃತ್ತದ ಪೋಲೀಸರು ವಾರ್ಷಿಕ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದು ಗುಂಪು ಸ್ಪರ್ಧೆಯಲ್ಲಿ ಎರಡು ಪ್ರಥಮ ಬಹುಮಾನ ಗಳನ್ನು ತಮ್ಮದಾಗಿಸಿಕೊಂಡರು.
ಹಗ್ಗ ಜಗ್ಗಾಟ ಮತ್ತು ಕಬ್ಬಡ್ಡಿ ಆಟದಲ್ಲಿ ಪ್ರಥಮ ಸ್ಥಾನವನ್ನು ಬಹುಮಾನ ಪಡೆದುಕೊಂಡರು.
ಹಾಗೂ 400*100 ಮೀಟರ್ ರಿಲೆ ಓಟದಲ್ಲಿ ತೃತೀಯ ಬಹುಮಾನ ಪಡೆದುಕೊಂಡರು.

 

 

ವೈಯಕ್ತಿಕ ಕ್ರೀಡೆಯಲ್ಲಿ ಚಾಂಪಿಯನ್ ಆಗಿ ಮೂಡಿ ಬಂದ ವನಿತಾ

ಬಂಟ್ವಾಳ ನಗರ ಪೋಲೀಸ್ ಠಾಣೆಯ ಮಹಿಳಾ ಪೋಲೀಸ್ ಸಿಬ್ಬಂದಿ ವನಿತಾ ಅವರು ವೈಯಕ್ತಿಕ ಆಟೋಟ ಸ್ಪರ್ಧೆಯಲ್ಲಿ ಚಾಂಪಿಯನ್ ಅಗಿ ಮಿಂಚಿದ್ದಾರೆ.
100, 200 , 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಲಾಂಗ್ ಜಂಪ್ ನಲ್ಲಿ ದ್ವಿತೀಯ, ರೈಪಲ್ ಶೂಟಿಂಗ್ ನಲ್ಲಿ ಥರ್ಡ್ ಪ್ರೈಸ್ ಪಡೆದುಕೊಂಡಿದ್ದಾರೆ.

ಇವರು ಈ ಹಿಂದೆ ನಡೆದ ರಾಜ್ಯ ಮಟ್ಟದ ಪೋಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ನಗರ ಪೋಲಿಸ್ ಠಾಣೆಯ ಸಿಬ್ಬಂದಿ ಮುತ್ತಪ್ಪ ಅವರು 100, 400, 800 ಮೀಟರ್ ಓಟದಲ್ಲಿ ದ್ವೀತಿಯ ಹಾಗೂ 400* 100 ರಿಲೆಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಸಶಸ್ತ್ರ ಮೀಸಲು ವಿಶೇಷ ಪಡೆ ಮಂಗಳೂರು , ಸುಳ್ಯ ವೃತ್ತ, ಪುತ್ತೂರು ವೃತ್ತ, ಬಂಟ್ವಾಳ, ಬೆಳ್ತಂಗಡಿ ವೃತ್ತದ ಪೋಲೀಸರು ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದರು.

 

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...