Friday, June 27, 2025

ಪೋಲೀಸ್ ಕ್ರೀಡಾ ಕೂಟದಲ್ಲಿ ಚಾಂಪಿಯನ್ ಆಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯ ವನಿತಾ ಬಂಟ್ವಾಳ ವೃತ್ತಕ್ಕೆ ಎರಡು ಪ್ರಥಮ ಬಹುಮಾನ

ಬಂಟ್ವಾಳ: ಮಾ.17 ಜಿಲ್ಲಾ ಪೊಲೀಸ್ ಇಲಾಖೆ ಯ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಮಂಗಳೂರು ಪೊಲೀಸ್ ಕ್ರೀಡಾಂಗಣದಲ್ಲಿ ನಡೆಯಿತು. ವಿವಿಧ ಆಟೋಟಗಳು ನಡೆದು ಪುರುಷರ ವಿಭಾಗದ ಚಾಂಪಿಯನ್ ಆಗಿ ಜಿಲ್ಲಾ ಪೊಲೀಸ್ ನ ರಾಧಕೃಷ್ಣ ಗೌಡ, ಮಹಿಳಾ ವಿಭಾಗದಲ್ಲಿ ವನೀತಾ ಅವರು ಪ್ರಶಸ್ತಿ ಪಡೆದರು. ತಂಡ ಪ್ರಶಸ್ತಿ ಡಿ.ಎ.ಆರ್/ಡಿ.ಪಿ.ಓ ತಂಡದ ಪಾಲಾಯಿತು.

  

 

ಸಮಾರೋಪ ಸಮಾರಂಭದಲ್ಲಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ವಿಜೇತರಿಗೆ ಬಹುಮಾನ ವಿತರಿಸಿದರು.

ಡಿ.ಎ.ಆರ್ ಘಟಕದ ಪೊಲೀಸ್ ನಿರೀಕ್ಷಕರಾದ ನಾರಾಯಣ ಪೂಜಾರಿ,ಜಿಲ್ಲೆಯ ಪೊಲೀಸ್ ಉಪಾಧಿಕ್ಷಕರುಗಳು, ನಿರೀಕ್ಷಕರುಗಳು, ಉಪ ನಿರೀಕ್ಷಕರುಗಳು ಉಪಸ್ಥಿತರಿದ್ದರು. ಸಮಾರೋಪ ಸಭೆಯ ನಂತರ ಮನರಂಜನೆಗಾಗಿ ಪೊಲೀಸ್ ಸಿಬ್ಬಂದಿಗಳಿಂದ ಕೊರೊನಾ ವಾರಿಯರ್ಸ್, ಕರ್ನಾಟಕ ವೈಭವ, ಶ್ವೇತಾ ಕುಮಾರ ಛದ್ಮವೇಶ ನಡೆಯಿತು..ಡಿ.ಎ.ಆರ್ ತಂಡವು ಪ್ರಸ್ತುತ ಪಡಿಸಿದ ಕೊರೊನಾ ವಾರಿಯರ್ಸ್ ನ ಕೊರೊನಾಕ್ಕೆ ಧರ್ಮವಿಲ್ಲ ಎಂಬ ಉತ್ತಮ ಸಂದೇಶ ನೀಡಿದ ಛದ್ಮವೇಷ ಸೇರಿದವರ ವಿಶೇಷ ಪ್ರಶಂಸೆ ಗೆ ಪಾತ್ರವಾಯಿತು. ಛದ್ಮವೇಶ ಸ್ಪರ್ಧಾ ಕಾರ್ಯಕ್ರಮವನ್ನು ಖುದ್ದಾಗಿ ವೀಕ್ಷಿಸಿ ದ ಜಿಲ್ಲಾ ಪೋಲೀಸ್ ಅಧೀಕ್ಷಕರು ನಗದು ಬಹುಮಾನ ನೀಡಿ ಪ್ರೋತ್ಸಾಹ ನೀಡಿದ್ದಾರೆ.

ಬಂಟ್ವಾಳ ವೃತ್ತಕ್ಕೆ ಎರಡು ಪ್ರಥಮ ಬಹುಮಾನ

ಬಂಟ್ವಾಳ ವೃತ್ತದ ಪೋಲೀಸರು ವಾರ್ಷಿಕ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದು ಗುಂಪು ಸ್ಪರ್ಧೆಯಲ್ಲಿ ಎರಡು ಪ್ರಥಮ ಬಹುಮಾನ ಗಳನ್ನು ತಮ್ಮದಾಗಿಸಿಕೊಂಡರು.
ಹಗ್ಗ ಜಗ್ಗಾಟ ಮತ್ತು ಕಬ್ಬಡ್ಡಿ ಆಟದಲ್ಲಿ ಪ್ರಥಮ ಸ್ಥಾನವನ್ನು ಬಹುಮಾನ ಪಡೆದುಕೊಂಡರು.
ಹಾಗೂ 400*100 ಮೀಟರ್ ರಿಲೆ ಓಟದಲ್ಲಿ ತೃತೀಯ ಬಹುಮಾನ ಪಡೆದುಕೊಂಡರು.

 

 

ವೈಯಕ್ತಿಕ ಕ್ರೀಡೆಯಲ್ಲಿ ಚಾಂಪಿಯನ್ ಆಗಿ ಮೂಡಿ ಬಂದ ವನಿತಾ

ಬಂಟ್ವಾಳ ನಗರ ಪೋಲೀಸ್ ಠಾಣೆಯ ಮಹಿಳಾ ಪೋಲೀಸ್ ಸಿಬ್ಬಂದಿ ವನಿತಾ ಅವರು ವೈಯಕ್ತಿಕ ಆಟೋಟ ಸ್ಪರ್ಧೆಯಲ್ಲಿ ಚಾಂಪಿಯನ್ ಅಗಿ ಮಿಂಚಿದ್ದಾರೆ.
100, 200 , 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಲಾಂಗ್ ಜಂಪ್ ನಲ್ಲಿ ದ್ವಿತೀಯ, ರೈಪಲ್ ಶೂಟಿಂಗ್ ನಲ್ಲಿ ಥರ್ಡ್ ಪ್ರೈಸ್ ಪಡೆದುಕೊಂಡಿದ್ದಾರೆ.

ಇವರು ಈ ಹಿಂದೆ ನಡೆದ ರಾಜ್ಯ ಮಟ್ಟದ ಪೋಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ನಗರ ಪೋಲಿಸ್ ಠಾಣೆಯ ಸಿಬ್ಬಂದಿ ಮುತ್ತಪ್ಪ ಅವರು 100, 400, 800 ಮೀಟರ್ ಓಟದಲ್ಲಿ ದ್ವೀತಿಯ ಹಾಗೂ 400* 100 ರಿಲೆಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಸಶಸ್ತ್ರ ಮೀಸಲು ವಿಶೇಷ ಪಡೆ ಮಂಗಳೂರು , ಸುಳ್ಯ ವೃತ್ತ, ಪುತ್ತೂರು ವೃತ್ತ, ಬಂಟ್ವಾಳ, ಬೆಳ್ತಂಗಡಿ ವೃತ್ತದ ಪೋಲೀಸರು ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದರು.

 

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...