Friday, June 27, 2025

ರಾಣಿ ಅಬ್ಬಕ್ಕ ಕೇಂದ್ರದ ಭೌತಿಕ ಶೋಧ ಸ್ವರೂಪ ಮತ್ತು ತಾತ್ವಿಕತೆಕೃತಿ ಬಿಡುಗಡೆ

ಬಂಟ್ವಾಳ : ಇತಿಹಾಸವೆಂದರೆ ಕೇವಲ ರಾಜ ಮಹಾರಾಜರ ಸಾಧನೆ ಸಾಹಸಗಳ ದಾಖಲೆ ಎಂದು ಭ್ರಮಿಸಿದ ಕಾಲವೊಂದಿತ್ತು. ಆದರೆ, ಬದಲಾದ ಈ ಕಾಲ ಘಟ್ಟದಲ್ಲಿ ಇತಿಹಾಸದ ಬಗೆಗಿನ ದೃಷ್ಟಿಕೋನವೂ ಬದಲಾಗಿದೆ ಎಂದು ಪುತ್ತೂರಿನ ಸ್ವಾಮಿ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದ್ದಾರೆ.
ಅವರು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಪ್ರೊ.ತುಕಾರಾಂ ಪೂಜಾರಿ ಹಾಗೂ ಡಾ.ಆಶಾಲತ ಸುವರ್ಣ ಅವರು ಸಂಪಾದಿಸಿ ಪ್ರಕಟಿಸಿದ “ಭೌತಿಕ ಶೋಧ ಸ್ವರೂಪ ಮತ್ತು ತಾತ್ವಿಕತೆ” ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಇದೀಗ ಸಾಮಾನ್ಯರೂ ಇತಿಹಾಸದ ಒಂದು ಭಾಗ. ಅವರ ಬೇಕು ಬೇಡಗಳ, ದುಃಖ ದುಮ್ಮಾನಗಳ ಅಥವಾ ಅವರ ಕೊಡುಗೆಗಳು ದಾಖಲಾಗದೇ ಹೋದಲ್ಲಿ ಅದು ಪರಿಪೂರ್ಣ ಇತಿಹಾಸವೆನಿಸಲಾರದು ಎಂದು ಅಭಿಪ್ರಾಯಪಟ್ಟರು.
ಬಿ.ಸಿ.ರೋಡಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಗಿರೀಶ್ ಭಟ್ ಅಜೆಕ್ಕಳ ಅವರು ಕೃತಿಯ ಕುರಿತಾಗಿ ಮಾತನಾಡಿ, ದಾಖಲೆಗಳ ಆಧಾರದಲ್ಲಿ ರಚಿಸಲಾಗುವ ಇತಿಹಾಸದಲ್ಲಿ ಘಟನಾವಳಿಗಳಿಗಷ್ಟೇ ಸೀಮಿತವಾಗಿರುತ್ತದೆ. ಈ ಸಾಂಪ್ರದಾಯಿಕ ಮಾದರಿಯ ಇತಿಹಾಸದ ರಚನೆಯ ಹೊರತಾಗಿಯೂ ಚರಿತ್ರೆ ರಚನೆ ಸಾಧ್ಯ ಎಂಬುವುದನ್ನು ಈ ಕೃತಿಯಲ್ಲಿ ಚರ್ಚಿಸಲಾಗಿದೆ. ವಿವಿಧ ವಿದ್ವಾಂಸರುಗಳ ಪ್ರಬುದ್ಧ ಲೇಖನಗಳನ್ನೊಳಗೊಂಡ ಈ ಕೃತಿಯು ಒಂದು ಅಮೂಲ್ಯ ಸಂಶೋಧನಾ ಕೃತಿಯಾಗಿ ಮೂಡಿಬಂದಿದೆ ಎಂದು ಅಭಿಪ್ರಾಯಪಟ್ಟರು.
 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಹಿರಿಯ ಸಾಹಿತಿ    ಡಾ.ಏರ್ಯ ಲಕ್ಷ್ಮೀ ನಾರಾಯಣ ಆಳ್ವ ವಹಿಸಿದ್ದರು.    ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕ ಡಾ.ಗಣೇಶ್ ಅಮೀನ್ ಸಂಕಮಾರ್, ವಿವೇಕಾನಂದ ಕಾಲೇಜಿನ ಉಪನ್ಯಾಸಕ ಡಾ.ಶ್ರೀಷ ಕುಮಾರ್, ಕೆ.ಎಂ.ಬಾಲಕೃಷ್ಣ, ಕೃತಿಯ ಸಂಪಾದಕರಾದ ಪ್ರೊ.ತುಕಾರಾಂ ಪೂಜಾರಿ ಮತ್ತು ಡಾ ಆಶಾಲತಾ ಸುವರ್ಣ ಉಪಸ್ಥಿತರಿದ್ದರು.
ಮಹಾಬಲೇಶ್ವರ ಹೆಬ್ಬಾರ್ ಸ್ವಾಗತಿಸಿ, ವಂದಿಸಿದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಕ್ಯುರೇಟರ್ ನಯನ ನಿರೂಪಿಸಿದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...