Saturday, January 31, 2026

ಕಲ್ಲಡ್ಕ ಮಾದರಿ ಶಾಲೆಯಲ್ಲಿ ಎಂ.ಆರ್.ಪಿ.ಎಲ್ ಪ್ರಾಯೋಜಿತ ನೂತನ ಕೊಠಡಿಗಳ ಉದ್ಘಾಟನೆ

 

ಬಂಟ್ವಾಳ: ಕಲ್ಲಡ್ಕದ ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್.ಪಿ.ಎಲ್.ನ ಸಿ.ಎಸ್.ಆರ್.ನಿಧಿಯಿಂದ ಸುಮಾರು 63.2 ಲಕ್ಷ ರೂ ಅನುದಾನ ಮೊತ್ತದಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಹಾಗೂ ಶತಮಾನೋತ್ತರ ಬೆಳ್ಳಿಹಬ್ಬ ಸಮಾರಂಭ ಶನಿವಾರ ನಡೆಯಿತು.

ಎಂ.ಆರ್.ಪಿ.ಎಲ್. ಸಿ.ಎಸ್.ಆರ್. ವಿಭಾಗದ ಜನರಲ್ ಮ್ಯಾನೇಜರ್ ಸುಬ್ರಾಯ ಭಟ್ ಕೊಠಡಿಗಳನ್ನು ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಶಾಲೆಯ ಹಳೇ ವಿದ್ಯಾರ್ಥಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಾರ್ಯಕ್ರಮವನ್ನು ದೀಪೋಜ್ವಲನ ಮಾಡಿ ಉದ್ಘಾಟಿಸಿ ಮಾತನಾಡಿ, ದೇಶಭಕ್ತಿಯನ್ನು ಪ್ರೇರೇಪಿಸುವ , ಜೀವನದಲ್ಲಿ ಸ್ವಾವಲಂಬಿಯನ್ನಾಗಿಸುವ ಶಿಕ್ಷಣ ಇಂದು ಅಗತ್ಯ. ಇಂದು ಮಕ್ಕಳನ್ನು ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿಸುವ ಕಾರ್ಯವನಮ್ನು ಶಿಕ್ಷಕರು ಮಾಡಬೇಕು. ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಬುಬಕರ್ ಅಶ್ರಫ್ ಅವರ ಸೇವೆ ಈ ನಿಟ್ಟಿನಲ್ಲಿ ಅನನ್ಯ ಎಂದರು. ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಶಾಲೆಗಳ ಅಭಿವೃದ್ಧಿಗೆ ಸರ್ವನೆರವು ನೀಡುವುದಾಗಿ ಘೋಷಿಸಿ ಶುಭ ಹಾರೈಸಿದರು.

ಶಾಲಾ ಹಳೇ ವಿದ್ಯಾರ್ಥಿಗಳೂ ಆಗಿರುವ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ ಮತ್ತು ಪದ್ಮನಾಭ ಕೊಟ್ಟಾರಿ ಶುಭಾಶಂಸನೆಗೈದರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ತಾಪಂ ಸದಸ್ಯ ಮಹಾಬಲ ಆಳ್ವ, ಗೋಳ್ತಮಜಲು ಗ್ರಾಪಂ ಅಧ್ಯಕ್ಷ ಅಭಿಷೇಕ್ ಎನ್, ಉಪಾಧ್ಯಕ್ಷೆ ಲಕ್ಷ್ಮೀ ವಿ.ಪ್ರಭು, ಉದ್ಯಮಿಗಳಾದ ಜಿ. ಅಬುಬಕ್ಕರ್, ಸಂತೋಷ್ ಶೆಟ್ಟಿ ಅರೆಬೆಟ್ಟು, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ದಾನಿ ರಮೇಶ್ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಸುಜಾತಾ ಕುಮಾರಿ, ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ನಾಗೇಶ್ ಕೆ., ಕಾರ್ಯದರ್ಶಿ ಯತಿನ್ ಕುಮಾರ್, ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಡಾ ಸುರೇಶ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಅಬುಬಕ್ಕರ್ ಅಶ್ರಫ್ ಸ್ವಾಗತಿಸಿದರು. ಸಮಿತಿಯ ವಜ್ರನಾಥ ಕಲ್ಲಡ್ಕ ವಂದಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...