ಬೊಂಡಾಲ ಶ್ರೀ ಮಹಾಗಣಪತಿ ದೇವಾಲಯದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ತಾ.12 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪರಮಪೂಜ್ಯ ಡಾ||ವಿರೇಂದ್ರ ಹೆಗ್ಗಡೆ ಯವರ ದಿವ್ಯ ಹಸ್ತದಿಂದ ಮಾಣಿಲ ಶ್ರೀಗಳ ಮಾರ್ಗದರ್ಶನ ದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ.ಪದ್ಮನಾಭ ಕೊಟ್ಟಾರಿ ಹಾಗೂ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಯಿತು.














