Thursday, July 10, 2025

ಬಿಜೆಪಿ ಗೆಲ್ಲಿಸಿ, ಮೋದಿಯವರನ್ನು ಪ್ರಧಾನಿಯಾಗಿಸಿ: ಪ್ರಭಾಕರ ಪ್ರಭು

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರ ಕಳೆದ ಐದು ವರ್ಷದ ಆಡಳಿತಾವಧಿಯಲ್ಲಿ ಅನೇಕ ಜನಪರ ಹಾಗೂ ರಾಷ್ಟ್ರ ರಕ್ಷಣೆಗೆ ಪೂರಕವಾದ ಯೋಜನೆಯನ್ನು ಜಾರಿಗೆ ತಂದಿದ್ದು, ಅದು ಪೂರ್ಣಪ್ರಮಾಣದಲ್ಲಿ ಅನುಷ್ಠಾನವಾದ ನಿಟ್ಟಿನಲ್ಲಿ ಮತ್ತೆ ಮೊದಿಯವರನ್ನೇ ಪ್ರಧಾನಿಯನ್ನಾಗಿಸಬೇಕು ಎಂದು ಬಂಟ್ವಾಳ ಬಿಜೆಪಿಯ ಚುನಾವಣಾ ನಿರ್ವಹಣಾ ಸಮಿತಿ ಬೂತ್ ಪ್ರಭಾರಿ ಪ್ರಭಾಕರ ಪ್ರಭು ಅವರು ಹೇಳಿದರು.
ಅವರು ರವಿವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರಳ ಗ್ರಾಮದ 31ನೇ ಬೂತ್ ವಿಶೇಷ ಸಂಪರ್ಕ ಅಭಿಯಾನದಲ್ಲಿ ಮಾತನಾಡಿದರು.
ಪ್ರಧಾನಿ ಮೋದಿಯವರ ದೂರದೃಷ್ಠಿಯುಳ್ಳ ಯೋಜನೆಯಿಂದಾಗಿ ಭ್ರಷ್ಠಾಚಾರ ರಹಿತ, ಶಾಂತಿಯುತ ಸಮಾಜ ನಿರ್ಮಾಣವಾಗಿದ್ದು, ಜಗತ್ತಿನಲ್ಲಿಯೇ ಇದು ಭಾರತಕ್ಕೆ ಕೀರ್ತಿಯನ್ನು ತಂದುಕೊಟ್ಟಿದೆ ಎಂದು ತಿಳಿಸಿದ ಪ್ರಭು ಅವರು, ಮೋದಿಯವರ ಈ ಶಕ್ತಿ ನಮಗೆ ಹೆಮ್ಮೆ ತಂದಿದೆ ಎಂದರು. ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಮರ್ಥ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸುವ ನಿಟ್ಟಿನಲ್ಲಿ ಕ್ಷೇತ್ರದ ಪೇಜ್ ಪ್ರಮುಖ್, ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಜಗದೀಶ ಆಳ್ವ, ಲಕ್ಷ್ಮೀಧರ ಶೆಟ್ಟಿ, ಡೊಂಬಯ ಅರಳ, ಪ್ರಸನ್ನ ಕುಮಾರ್‌ ಶೆಟ್ಟಿ, ನಾಗೇಶ್ ಮಾನ್ಯ, ರಾಜೇಶ್ ಮಾನ್ಯ, ಯೋಗೀಶ್ ಕುಲಾಲ್, ತಿಮ್ಮಪ್ಪ ಪೂಜಾರಿ, ಚಂದ್ರಹಾಸ, ಆಂದ ಮೇಲಾಂಟ, ಸತೀಶ, ಅರುಣ್ ಅರಳ ಮತ್ತಿತರರು ಭಾಗವಹಿಸಿದ್ದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...