Tuesday, February 3, 2026

ಸುರಕ್ಷತಾ ಕ್ರಮ ಕೈಗೊಳ್ಳದೆ ಕಾಮಗಾರಿ : ಕಾರ್ಮಿಕನ ಸಾವು. ಕಾರ್ಮಿಕನ ಸಾವಿಗೆ ಮಾಲಕನ ನಿರ್ಲಕ್ಷ್ಯ ತನ ಕಾರಣ ಸುರಕ್ಷತಾ ಕ್ರಮವಿಲ್ಲದೆ ಕೆಲಸ ಮಾಡಿದ ಕಾರ್ಮಿನ ಸಾವಿಗೆ ಕಾರಣವಾದ ಮಾಲಕನ ಮೇಲೆ ಕಾನೂನು ಕ್ರಮ ಕೈಗೊಳ್ಳಲು ದೂರು

ಬಂಟ್ವಾಳ: ಮಾಲಕನ ನಿರ್ಲಕ್ಷ್ಯ ದಿಂದ ಕೆಲಸಗಾರನೋರ್ವ ಮೃತಪಟ್ಟ ಘಟನೆ ನಡೆದಿದೆ , ಹಾಗಾಗಿ ಕಾರ್ಮಿಕನ ಸಾವಿಗೆ ಮಾಲಕನೇ ಕಾರಣವಾಗಿದ್ದು ಆತನ ಮೇಲೆ ಕಾನೂನು ಕ್ರಮಕೈಗೊಳ್ಳಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ಲೈ ವುಡ್ ಫ್ಯಾಕ್ಟರಿಗೆ ಸಿಮೆಂಟ್ ಸೀಟು ಹಾಕುವ ವೇಳೆ ಓರ್ವ ಕಾರ್ಮಿಕ ಸೀಟು ತುಂಡಾಗಿ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ಇನ್ನೊಬ್ಬ ಕಾರ್ಮಿಕ ನಿಗೆ ಕೈಗೆ ಗಾಯಗೊಂಡಿದೆ.

ಘಟನೆಯ ಲ್ಲಿ ಅಬೂಬಕ್ಕರ್ ಸಿದ್ದಿಕ್‌(68) ಮೃತಪಟ್ಟ ವ್ಯಕ್ತಿಯಾಗಿದ್ದು , ಗಾಯಾಳು

ನಂದಾವರ ನಿವಾಸಿ ಇಬ್ರಾಹಿಂ ಖಲೀಲ್ (24) ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ದೂರು ನೀಡಿದ್ದಾರೆ.

ಮಾಲಕ ಆರೋಪಿ ಬಿ ಅಬ್ದುಲ್ ಸಲಾಂ ಮೇಲೆ ಕಾನೂನು ಕ್ರಮಕೈಗೊಳ್ಳಿ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

 *ಘಟನೆಯ ವಿವರ* 

ಅಬೂಬಕ್ಕರ್ ಸಿದ್ದಿಕ್, ಸುಜಯ್ ರಾಕಿಬ್ ಮತ್ತು ಸಿನಾನ್ ರೊಂದಿಗೆ ತುಂಬೆ ಬಿ.ಎ ಟಿಂಬರ್ & ಮ್ಯಾನ್ಯುಫ್ಯಾಕ್ಚರಿಂಗ್ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಸುಮಾರು 6 ದಿನಗಳಿಂದ ಸಿಮೆಂಟ್ ಶೀಟ್ ಹಾಕುವ ಕೆಲಸವನ್ನು ಮಾಡಿಕೊಂಡಿದ್ದು, ಈ ದಿನ ಜೂನ್ 02 ರಂದು ಬೆಳಿಗ್ಗೆ 08.30 ಗಂಟೆಗೆ ಎಂದಿನಂತೆ ಎಲ್ಲರೂ ಕೆಲಸ ಮಾಡುತ್ತಿದ್ದ ಸಮಯ ಅಬೂಬಕ್ಕರ್ ಸಿದ್ದಿಕ್ (68) ಮತ್ತು ಖಲೀಲ್ ಫ್ಲೈವುಡ್ ಫ್ಯಾಕ್ಟರಿಯ ಮೇಲೆ ಸಿಮೆಂಟ್ ಶೀಟ್ ಹಾಕುತ್ತಿದ್ದ ವೇಳೆ ಸುಮಾರಯ 11.30 ಗಂಟೆಗೆ ಅಬೂಬಕ್ಕರ್ ಸಿದ್ದಿಕ್ ರವರು ಸಿಮೆಂಟ್ ಶೀಟ್ ನ ಮೇಲೆ ಕಾಲಿಟ್ಟಾಗ ಸಿಮೆಂಟ್ ಶೀಟ್ ನ ಮಧ್ಯ ಭಾಗ ತುಂಡಾಗಿ ಫ್ಲೈವುಡ್ ಫ್ಯಾಕ್ಟರಿಯ ಸ್ಟೀಮ್ ಪೈಪ್ ನ ಮೇಲೆ ಬಿದ್ದು, ಅವರ ಜೊತೆಯಲ್ಲಿ ಖಲೀಲ್ ಕೂಡಾ ಕೆಳಗೆ ಬಿದ್ದು, ಎಡಕೈಗೆ ಗುದ್ದಿದ ಗಾಯವಾಗಿದೆ, ಆದರೆ ಅಬೂಬಕ್ಕರ್ ಸಿದ್ದಿಕ್ ರವರಿಗೆ ತಲೆಯ ಹಿಂಬದಿಗೆ ತೀವ್ರ ಸ್ವರೂಪದ ಗಾಯವುಂಟಾಗಿದ್ದು, ಖಲೀಲ್ ಮತ್ತು ಅಬೂಬಕ್ಕರ್ ಸಿದ್ದಿಕ್ ರವರನ್ನು ಫ್ಲೈವುಡ್ ಫ್ಯಾಕ್ಟರಿಯ ಕೆಲಸದವರು ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.ಆದರೆ ತಲೆಗೆ ಗಂಭೀರ ಗಾಯವಾಗಿದ್ದ

ಅಬೂಬಕ್ಕರ್ ಸಿದ್ದಿಕ್ ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು‌

ಗಂಭೀರ ಗಾಯಗೊಂಡ ಸಿದ್ದೀಕ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸುಮಾರು 3.30 ಗಂಟೆಗೆ ಮೃತಪಟ್ಟಿರುವುದಾಗಿ ಪೋಲೀಸರು ಮಾಹಿತಿ ನೀಡಿದ್ದಾರೆ.

ಫ್ಲೈವುಡ್ ಫ್ಯಾಕ್ಟರಿಗೆ ಅಳವಡಿಸಿದ ಸಿಮೆಂಟ್ ಶೀಟ್ ಹಳೇಯದಾಗಿದ್ದು, ಸಿಮೆಂಟ್ ಶೀಟನ್ನು ಸಮಯಕ್ಕೆ ಸರಿಯಾಗಿ ಬದಲಾವಣೆ ಮಾಡದೇ ಅಲ್ಲದೇ, ಕೆಲಸದವರಿಗೆ ಕೆಲಸ ಮಾಡುತ್ತಿದ್ದ ಸಮಯ ಯಾವುದೇ ಸುರಕ್ಷತಾ ಕ್ರಮವನ್ನು ಅಳವಡಿಸದೇ ಕೆಲಸ ಮಾಡಿಸುತ್ತಿದ್ದುದರಿಂದ ಫ್ಲೈವುಡ್ ಫ್ಯಾಕ್ಟರಿಯ ಮಾಲಕರಾದ ಬಿ ಅಬ್ದುಲ್ ಸಲಾಂ ರವರ ನಿರ್ಲಕ್ಷತನದಿಂದ ಅಬೂಬಕ್ಕರ್ ಸಿದ್ದಿಕ್ ರವರು ಕೆಲಸ ಮಾಡುತ್ತಿರುವಾಗ ಸಿಮೆಂಟ್ ಶೀಟ್ ನ ಮೇಲೆ ಕಾಲಿಡುವ ಸಮಯ ಸಿಮೆಂಟ್ ಶೀಟ್ ತುಂಡಾಗಿ ಕೆಳಗೆ ಬಿದ್ದು ಮೃತಪಡಲು ಕಾರಣವಾಗಿದೆ, ಆದುದರಿಂದ ಫ್ಲೈವುಡ್ ಫ್ಯಾಕ್ಟರಿಯ ಮಾಲಕ ಬಿ ಅಬ್ದುಲ್ ಸಲಾಂ ರವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗಿದೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...