Saturday, July 12, 2025

ಬಂಟ್ವಾಳ: ಪಿಂಚಣಿದಾರರ ಸಂಘದ ಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ಪ್ರಥಮ ಕಾರ್ಯಕಾರಿಣಿ ಸಮಿತಿ ಸಭೆಯು ತಾಲೂಕು ಸರಕಾರಿ ನೌಕರರ ಭವನದಲ್ಲಿ ಸಂಘದ ಅಧ್ಯಕ್ಷ ಲೋಕನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ 2021 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಮುಂದಿನ ನವಂಬರ್ 25 ರಂದು ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಭವನದಲ್ಲಿ ನಡೆಸಲು ಸಭೆ ತೀರ್ಮಾನಿಸಿದ್ದು,ಈ ಸಂದರ್ಭ 75 ವರ್ಷ ತುಂಬಿದ 33 ಮಂದಿ ಹಿರಿಯ ಸದಸ್ಯರನ್ನು ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಹಾಗೆಯೇ ಪಿಂಚಣಿದಾರರು 2021 ನೇ ವರ್ಷದ ಜೀವಿತ ಪ್ರಮಾಣಪತ್ರವನ್ನು ತಾವು ಪಿಂಚಣಿ ಪಡೆಯುವ ಬ್ಯಾಂಕಿನ ಮುಖ್ಯಸ್ಥರಿಗೆ ನವಂಬರ್ ತಿಂಗಳಲ್ಲಿ ಕಡ್ಡಾಯವಾಗಿ ತಲುಪಿಸುವಂತೆ ಕೋರಲಾಯಿಗಿದೆ ಎಂದು ಪ್ರಕಟಣೆ ತಿಳಿಸಿದೆ. ಕಾರ್ಯದರ್ಶಿ ನೀಲೋಜಿ ರಾವ್ ವರದಿ ವಾಚಿಸಿದರು.ಕೋಶಾಧಿಕಾರಿ ಜಲಜಾಕ್ಷಿ ಕುಲಾಲ್ ಲೆಕ್ಕಪತ್ರ ಮಂಡಿಸಿದರು.ಜತೆ ಕಾರ್ಯದರ್ಶಿ ಎ.ದಾಮೋದರ,ಹಿರಿಯ ಸದಸ್ಯರಾದ ನಾಟಿ ಕೃಷ್ಣರಾಜ ಶೆಟ್ಟಿ, ಶ್ರೀಧರಗೌಡ, ಶಿವಶಂಕರ್,ಪಿ.ದಿನಕರ್,ಚಂದ್ರಶೇಖರಗಟ್ಟಿ,ಚಂದು ನಾಯ್ಕ್,ರಾಘವನ್ ನಾಯರ್,ಸಂಕಪ್ಪ ಶೆಟ್ಟಿ,ಕಮಾಲಾಕ್ಷ,ಜಯರಾಮ ಪೂಜಾರಿ, ರಾಮಚಂದ್ರ ಮಾಸ್ಟರ್, ನಂದಕಿಶೋರ್, ಸುಂದರ ಮೂಲ್ಯ, ದೇವುಗೌಡ, ಬಾಬುಮೂಲ್ಯ, ದೇವರಾಜ ಭಂಡಾರಿ, ವಿಳ್ಮಡ್ ಸಿಕ್ವೇರಾ ಉಪಸ್ಥಿತರಿದ್ದರು. ಸೋಮಪ್ಪ ಬಂಗೇರ ವಂದಿಸಿದರು.

More from the blog

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...