Wednesday, February 12, 2025

ಮಂಗಳೂರಿಗೆ ಪ್ರಧಾನಿ ಮೋದಿ, ಕಾರ್ಯಕರ್ತರಿಗೆ ವ್ಯವಸ್ಥಿತ ರೀತಿಯ ಪಾರ್ಕಿಂಗ್

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕಾಗಿ ಮಂಗಳೂರಿನ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಕ್ಕೆ ಆಗಮಿಸುವ ಕಾರ್ಯಕರ್ತರು ವಾಹನ ಪಾರ್ಕಿಂಗ್ ವ್ಯವಸ್ಥೆ ಈ ಕೆಳಗಿನಂತಿವೆ.

ರೂಟ್‍ನಂಬ್ರ: 1 ಉಡುಪಿ, ಕಾರ್ಕಳ,ಪಡುಬಿದ್ರೆ, ಮುಲ್ಕಿ, ಸುರತ್ಕಲ್,(ಕಾರ್ಯಕರ್ತರನ್ನು ಕೆಳಗೆ ಇಳಿಸುವ ಸ್ಥಳ ) ಕಡೆಯಿಂದ ಬರುವಂತಹ ವಾಹನಗಳಿಗೆ.
ಕೊಟ್ಟಾರ ಚೌಕಿಯಾಗಿ – ಉರ್ವಸ್ಟೋರ್ – ಲೇಡಿಹಿಲ್ – ಲಾಲ್‍ಬಾಗ್ – ಪಿ.ವಿ.ಎಸ್ ಮಾರ್ಗವಾಗಿ ನವಭಾರತ್ ಸರ್ಕಲ್‍ನಲ್ಲಿ ಜನರನ್ನು ಇಳಿಸಿ ಕರಾವಳಿ ಉತ್ಸವ ಮೈದಾನ – ಉರ್ವ ಮಾರ್ಕೆಟ್ ಮೈದಾನ – ಉರ್ವಚರ್ಚ್ ಮೈದಾನ – ಕೆನರಾ ಹೈಸ್ಕೂಲ್‍ ಉರ್ವ ಮೈದಾನದಲ್ಲಿ ವಾಹನ ನಿಲುಗಡೆ ಮಾಡತಕ್ಕದ್ದು.
ರೂಟ್ ನಂಬ್ರ -2: ಸುಳ್ಯ- ಪುತ್ತೂರು- ಬೆಳ್ತಂಗಡಿ-ಬಂಟ್ವಾಳ- ಮೂಡಬಿದ್ರೆ–ಗುರುಪುರ ಕೈಕಂಬ ಕಡೆಯಿಂದ ಬರುವಂತಹ ವಾಹನಗಳಿಗೆ.
ಪಡೀಲ್ – ನಂತೂರು–ಕದ್ರಿ- ಬಲ್ಮಠ–ಜ್ಯೋತಿ ಸರ್ಕಲ್ (ಕಾರ್ಯಕರ್ತರನ್ನು ಕೆಳಗೆ ಇಳಿಸುವ ಸ್ಥಳ )ನಲ್ಲಿ ಜನರನ್ನು ಇಳಿಸಿ ಬಂಟ್ಸ್ ಹಾಸ್ಟೆಲ್ ಮಾರ್ಗವಾಗಿ ಬಂಟ್ಸ್ ಹಾಸ್ಟೆಲ್ ಮೈದಾನ–ಕದ್ರಿ ಮೈದಾನ – ಬಲ್ಮಠ ಶಾಂತಿ ನಿಲಯ ಮೈದಾನ- ಪದುವಾ ಹೈಸ್ಕೂಲ್ ಮೈದಾನದಲ್ಲಿ ವಾಹನ ನಿಲುಗಡೆ ಮಾಡತಕ್ಕದ್ದು.
ರೂಟ್ ನಂಬ್ರ– 3: ಕೋಣಾಜೆ–ದೇರಳಕಟ್ಟೆ – ಉಳ್ಳಾಲ- ತೋಕ್ಕೋಟ್ಟು – ಕಾಸರಗೋಡು ಕಡೆಯಿಂದ ಬರುವಂತಹ ವಾಹನಗಳಿಗೆ :
ತೋಕ್ಕೋಟ್ಟು – ಪಂಪ್‍ವೆಲ್–ಕಂಕನಾಡಿ– ವೆಲೆನ್ಸೀಯಾ– ಮಂಗಳಾದೇವಿ(ಕಾರ್ಯಕರ್ತರನ್ನು ಕೆಳಗೆ ಇಳಿಸುವ ಸ್ಥಳ ) ಜಂಕ್ಷನ್‍ನಲ್ಲಿ ಜನರನ್ನು ಇಳಿಸಿ ಎಮ್ಮೆಕೆರೆ ಮೈದಾನ– ವಾಮನ ನಾಯಕ್ ಮೈದಾನ– ಮೋರ್ಗನ್ಸ್‍ಗೇಟ್ ಮೈದಾನ ವಾಹನ ನಿಲುಗಡೆ ಮಾಡತಕ್ಕದ್ದು.
ಎಂದು ನರೇಂದ್ರ ಮೋದಿ ಸಾರ್ವಜನಿಕ ಸಭೆಯ ಪಾರ್ಕಿಂಗ್ ವ್ಯವಸ್ಥೆಯ ಪ್ರಮುಖ್ ಸಂದೇಶ್ ಶೆಟ್ಟಿ ತಿಳಿಸಿದ್ದಾರೆ .

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...