Saturday, July 12, 2025

ಮೋದಿ, ರಾಹುಲ್ ವಿರುದ್ಧ ಪುತ್ತೂರು ಯು.ಪಿ.ಶಿವಾನಂದ ಸ್ಪರ್ಧೆ

ಬಂಟ್ವಾಳ: ದ.ಕ.ಜಿಲ್ಲೆಯ ಪುತ್ತೂರು ಪ್ರತಿಷ್ಠಿತ ಪತ್ರಿಕೆಯ ಸಂಪಾದಕ ಪ್ರಧಾನಿ ಅಭ್ಯರ್ಥಿ ಗಳ ವಿರುದ್ದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಸುದ್ದಿ ಬಿಡುಗಡೆ ಪತ್ರಿಕೆ ಯ ಪ್ರಧಾನ ಸಂಪಾದಕ ಡಾ| ಯು.ಪಿ.ಶಿವಾನಂದ ಅವರು ಇವರಿಬ್ಬರ ವಿರುದ್ಧ ಸ್ಪರ್ಧೆಗೆ ರೆಡಿಯಾಗಿದ್ದಾರೆ.

ಆಡಳಿತವು ‘ದಿಲ್ಲಿಯಿಂದ ಹಳ್ಳಿಗಲ್ಲ, ಹಳ್ಳಿಯಿಂದ ದಿಲ್ಲಿಗೆ’ ಎಂಬುದನ್ನು ಪ್ರತಿಪಾದಿಸುವ ಸಲುವಾಗಿ ರಾಷ್ಟ್ರದ ಪ್ರಮುಖ ನಾಯಕರಾದ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯ ವಿರುದ್ಧ ಸ್ಪರ್ಧಿಸುವುದಾಗಿ ಸುಳ್ಯ ಮೂಲದ ‘ಸುದ್ದಿ ಬಿಡುಗಡೆ’ ಪತ್ರಿಕೆಯ ಪ್ರಧಾನ ಸಂಪಾದಕ ಡಾ.ಯು.ಪಿ.ಶಿವಾನಂದ ಘೋಷಿಸಿದ್ದಾರೆ.
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯ ಗ್ರಾಮ ಸ್ವರಾಜ್ಯ ಮತ್ತು ರಾಮರಾಜ್ಯದ ಕನಸನ್ನು ನನಸು ಮಾಡುವ ಸಲುವಾಗಿ ತಾನು ಜನಜಾಗೃತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ಬಲತ್ಕಾರದ ಭಾರತ್ ಬಂದ್ ಮತ್ತು ನೇತ್ರಾವತಿ ನದಿ ತಿರುವು ಯೋಜನೆಯ ವಿರುದ್ಧವೂ ಗ್ರಾಮೀಣ ಭಾಗದಲ್ಲಿ ತನ್ನದೇ ಆದ ರೀತಿಯಲ್ಲಿ ಹೋರಾಟ ಮಾಡುತ್ತಾ ಬಂದಿದ್ದೇನೆ. ವಸ್ತುಸ್ಥಿತಿಯ ಅರಿವು ಇದ್ದರೂ ಕೂಡ ಸ್ಥಳೀಯ ನಾಯಕರು ದಿಲ್ಲಿ ರಾಜಕಾರಣದ ವಿರುದ್ಧ ಸೊಲ್ಲೆತ್ತಲಾಗದೆ ಪರಿತಪಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ನಾಯಕರಿಗಿಂತಲೂ ರಾಷ್ಟ್ರಮಟ್ಟದ ನಾಯಕರ ಗಮನಸೆಳೆಯುವ ಸಲುವಾಗಿ ತಾನು ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪಕ್ಷೇತರನಾಗಿ ಸ್ಪರ್ಧೆ ಮಾಡುವುದಾಗಿ ತಿಳಿಸಿದರು.
ಈ ಬಗ್ಗೆ ತಾನು ಈಗಾಗಲೆ ಸಮಾನಮನಸ್ಕರು, ಚಿಂತಕರ ಜೊತೆ ಸಮಾಲೊಚನೆ ಮಾಡಿದ್ದೇನೆ. ಅಮೇಠಿಗೆ ತೆರಳಿ ಅಲ್ಲಿನ ಜನರೊಂದಿಗೆ ಚರ್ಚೆ ನಡೆಸಿದ್ದೇನೆ. ಮುಂದೆ ವಾರಣಾಸಿಗೂ ತೆರಳುವೆ. ಈ ಎರಡೂ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿ ಬಳಿಕ ಅಲ್ಲೇ ಪ್ರಚಾರ ಕಾರ್ಯ ಮಾಡಲಿದ್ದೇನೆ ಎಂದು ಡಾ.ಯು.ಪಿ.ಶಿವಾನಂದ ಹೇಳಿದರು.ದೇಶಕ್ಕೆ ಸ್ವಾತಂತ್ರ ಬಂದು 70 ವರ್ಷಗಳಾದರೂ ಬ್ರಿಟಿಷರ ಕಾಲದ ಆಡಳಿತದ ದಾಸ್ಯದಿಂದ ನಾವು ಮುಕ್ತವಾಗಿಲ್ಲ. ಬಹುತೇಕ ಕಾನೂನುಗಳಲ್ಲೂ ಬ್ರಿಟಿಷರ ಕಾಲದ ಆಡಳಿತ ಛಾಯೆ ಇದೆ. ಇಲ್ಲಿ ಪ್ರಜೆಗಳೇ ಪ್ರಭುಗಳಾಗಿಲ್ಲ. ನಮ್ಮ ಧ್ವನಿಯಾಗಲು ನಾವು ಆಯ್ಕೆ ಮಾಡಿದ ಜನಪ್ರತಿನಿಧಿಯು ದಿಲ್ಲಿಯ ಆದೇಶಗಳಿಗೆ ಕಾಯುವಂತಹ ಪರಿಸ್ಥಿತಿ ಇದೆ. ಇದನ್ನು ಹೋಗಲಾಡಿಸಬೇಕಿದೆ. ಈ ನಿಟ್ಟಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿರುವೆ. ದೇಶದ ರಾಜಧಾನಿ ಹೊಸದಿಲ್ಲಿಯಿಂದ ನಮ್ಮ ಬಳಗದ ಪರವಾಗಿ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಡಾ.ಯು.ಪಿ.ಶಿವಾನಂದ ನುಡಿದರು.
ಸುದ್ದಿಗೋಷ್ಠಿಯಲ್ಲಿ ‘ಸುದ್ದಿ ಬಿಡುಗಡೆ’ ಬಳಗದ ಸಂತೋಷ್ ಕುಮಾರ್ ಶಾಂತಿನಗರ, ಉಮೇಶ್ ಮಿತ್ತಡ್ಕ, ಹರೀಶ್ ಬಂಟ್ವಾಳ್, ಭಾಸ್ಕರ ರೈ, ಸನ್ಮಾನ್ ಮಾಧವ ಭಾಗಮಂಡಲ, ಸಿಂಚನ್ ಉರಿಬೈಲ್, ಸೃಜನ್ ಉರಿಬೈಲ್ ಉಪಸ್ಥಿತರಿದ್ದರು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...