Friday, July 11, 2025

ಆಸ್ತಿ ತೆರಿಗೆ ಜೊತೆ ಕಸದ ಶುಲ್ಕ ಸಂಗ್ರಹ : ಶಾಸಕ ನಾಯ್ಕ್ ಅಸಮಾಧಾನ

ಬಂಟ್ವಾಳ:  ಆಸ್ತಿ ತೆರಿಗೆಯ ಜೊತೆ ಹೆಚ್ಚುವರಿಯಾಗಿ ಕಸದ ಶುಲ್ಕವನ್ನು ವಸೂಲಿ ಮಾಡುವ ಮೂಲಕ ಜನರಿಗೆ ಮತ್ತಷ್ಟು ಹೊರೆ ಹಾಕಿರುವ ಪುರಸಭೆಯ ಕಾರ್ಯವೈಖರಿಗೆ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಾಸಕರು, ಚುನಾಯಿತ ಪ್ರತಿನಿಧಿಗಳ ಆಡಳಿತವಿಲ್ಲದಾಗ  ಅಧಿಕಾರಿಗಳು ಜನರ ಮೇಲೆ ಕಸದ ಮೇಲೆ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವುದು ಸರಿಯಲ್ಲ,ಈ ಬಗ್ಗೆ ಸಾರ್ವ ಜನಿಕರಿಂದ ತನಗೂ ದೂರು ಬಂದಿದೆ ಎಂದರು.   ಬಂಟ್ವಾಳದಲ್ಲಿ  ಕಸ ಸಂಗ್ರಹದ ವ್ಯವಸ್ಥೆಯೇ ಅವ್ಯವಸ್ಥೆಯಾಗಿರುವಾಗ ಪುರವಾಸಿಗಳಿಗೆ ಹೆಚ್ಚುವರಿ ಹೊರೆಯನ್ನು ವಿಧಿಸಿರುವುದು ಅಸಮಂಜಸವಾಗಿದೆ.    ಈ ಬಗ್ಗೆ ಆಡಳಿತಾಧಿಕಾರಿಯವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು,ಚುನಾವಣೆಯ ಬಳಿಕ ಈ ಕುರಿತಂತೆ ಕ್ರಮ ಕೈಗೊಳ್ಳ ಲಾಗುವುದು ಎಂದರು.   ಜಿಲ್ಲಾಧಿಕಾರಿಯವರು, ಸಹಾಯಕ ಕಮಿಷನರ್ ಅವರು ಒಂದು ದಿನ ಪೂರ್ತಿ ಪುರಸಭೆಯಲ್ಲಿದ್ದು , ಇಲ್ಲಿ ನಡೆದಿರುವ ಎಲ್ಲಾ ಅವ್ಯವಸ್ಥೆ,ಹಗರಣಗಳ ಪರಿಶೀಲನೆ ನಡೆಸುವ ಮಾತು ಕೊಟ್ಟಿದ್ದರೂ , ಅವರಿಗಿನ್ನು ಬರಲು ಪುರುಸೊತ್ತು ಸಿಗಲಿಲ್ಲ ಎಂದು ಶಾಸಕ ರಾಜೇಶ್ ನಾಯ್ಕ್ ಅಸಮಾಧಾನ ವ್ಯಕ್ತಪಡಿಸಿದರು.              ಖಂಡನೆ: ಕಸದ ಶುಲ್ಕ ಈ ಹಿಂದಿನಂತೆ ಪಡೆಯವುದಕ್ಕೆ ಅಭ್ಯಂತರವಿಲ್ಲ, ಆದರೆ ಕಸ ಸಂಗ್ರಹದ ವ್ಯವಸ್ಥೆಯಲ್ಲಿ ಸರಿಯಾಗದೆ ಶುಲ್ಕ ವಸೂಲಿ ಮಾಡುವ ಕ್ರಮವನ್ನು ಬಿಜೆಪಿ ಖಂಡಿಸುತ್ತದೆ ಮತ್ತು ಇದಕ್ಕೆ ತಮ್ಮ ವಿರೋಧವಿದೆ ಎಂದು ಪುರಸಭೆಯ ಮಾಜಿ ಸದಸ್ಯ ದೇವದಾಸ ಶೆಟ್ಟಿ ಹೇಳಿದರು.

More from the blog

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...