Friday, January 30, 2026

ಬಂಟ್ವಾಳ ಸಂಪೂರ್ಣ ಬಂದ್

ಬಂಟ್ವಾಳ: ಹೆಚ್ಚುತ್ತಿರುವ ಕೊರೊನಾ ಪ್ರಕರಣ ಜಿಲ್ಲೆ ಬಂದ್ ಗೆ ಜಿಲ್ಲಾ ಉಸ್ತುವಾರಿ ಸಚಿವರ ಆದೇಶದಂತೆ ಇಂದು ಸಂಪೂರ್ಣ ಬಂದ್ ಅಗಿದೆ.

ಆದರೆ ಬೆಳಗ್ಗಿನ ಜಾವ ಮಾತ್ರ ಮಂಗಳೂರು ಮಾರ್ಕೆಟ್ ನಲ್ಲಿ ಜನರು ಎಂದಿನಂತೆ ಕಂಡಿದ್ದು ಮಾತ್ರ ವಿಶೇಷವಾಗಿತ್ತು.

ಬಳಿಕ ಪೋಲೀಸರು ರಸ್ತೆಗಳಿದು ಜನರನ್ನು ತೆರಳುವಂತೆ ಸೂಚಿಸಿದ ಬಳಿಕ ಮಾರ್ಕೆಟ್ ಸಂಪೂರ್ಣ ಸ್ಥಬ್ತವಾಯಿತು.

ಬಂಟ್ವಾಳ ಸಂಪೂರ್ಣ ಬಂದ್
ಬಾರತ ಲಾಕ್ ಡೌನ್ ಅಗಿದ್ದರೂ ಕೂಡ ಜನರಿಗೆ ಅಗತ್ಯವಸ್ತುಗಳಿಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಸಡಿಲಿಕೆ ಮಾಡಿದ್ದರು, ಇದನ್ನು ಜನ ತಪ್ಪಾಗಿ ಅರ್ಥೈಸಿ ಸಾಮಾಜಿಕ ಅಂತರ ಕಾಪಾಡದೆ ಗುಂಪು ಗುಂಪಾಗಿ ತಿರುಗುವುದು ಹೆಚ್ಚಾಯಿತು.
ಇಂತಹ ಪರಿಸ್ಥಿತಿಯಲ್ಲಿ ಕಂಟ್ರೋಲ್ ಮಾಡುವ ಉದ್ದೇಶದಿಂದ ಜಿಲ್ಲೆಯ ನ್ನು ಸಂಪೂರ್ಣ ಬಂದ್ ಮಾಡಲು ಅದೇಶ ಮಾಡಿದ್ದಾರೆ.

ಬಂಟ್ವಾಳದಲ್ಲಿಯೂ ದಿನಬೆಳಗಾದರೆ ಮಾ.22 ರಿಂದ ಮಾ.27 ರವರೆಗೆ ನಿತ್ಯವೂ ಮಧ್ಯಾಹ್ನ ದವರೆಗೆ ಜನಜಂಗುಳಿ ಇತ್ತು.
ಆದೆ ಮಾದರಿಯಲ್ಲಿ ಇಂದು ಬೆಳಿಗ್ಗೆ ಕೂಡಾ ಜನ ರಸ್ತೆಗೆ ಇಳಿದಿದ್ದರು.ಆದರೆ ಅ ಮೊದಲೇ ರಸ್ತೆಗಳಿದ ಬಂಟ್ವಾಳ ಪೋಲೀಸರು ಜನರಿಗೆ ಬಂದ್ ನ ಬಗ್ಗೆ ಎಚ್ಚರಿಕೆ ನೀಡಿದರು.
ಬಳಿಕವೂ ಬಂದ್ ಮಾಡದ ಅಂಗಡಿ ಗಳಿಗೆ ಧ್ವನಿವರ್ಧಕ ಬಳಸಿ ಬಂದ್ ಮಾಡುವಂತೆ ಸೂಚನೆ ನೀಡಿದ್ದಾರೆ.
ಬಂದ್ ಮಾಡದ ಅಂಗಡಿ ಮಾಲಕರಿಗೆ ಹಾಗೂ ರಸ್ತೆ ಯಲ್ಲಿ ಅನಾವಶ್ಯಕ ತಿರುಗಿದರೆ ಲಾಠಿ ರುಚಿ ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

More from the blog

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...