Saturday, July 12, 2025

ಪಕ್ಷ ಸಂಘಟನಾತ್ಮಕವಾಗಿ ಬೆಳೆಯಲು ಕಾರ್ಯಕರ್ತರ ಮೌಲ್ಯಯುತ ಜವಬ್ದಾರಿ ಅಗತ್ಯ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಬಂಟ್ವಾಳ: ಪಕ್ಷವನ್ನು ಮುಂದಿನ ದಿನಗಳಲ್ಲಿ ಸಂಘಟನಾತ್ಮಕವಾಗಿ ಬೆಳೆಯಲು ನೂತನ ಪದಾಧಿಕಾರಿಗಳ ಜೊತೆ ಎಲ್ಲಾ ಕಾರ್ಯಕರ್ತರು ಬೆಂಬಲ ನೀಡುವಂತೆ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.
ಅವರು ಬಿಸಿರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಂಟ್ವಾಳ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸ ಪಶ್ಚಾತ್ತಾಪ ಇಲ್ಲದೆ ಖುಷಿಯಿಂದ ಕೆಲಸ ಮಾಡಲು ಸಾಧ್ಯವಾಗಿದೆ. ಪಕ್ಷದ ಮುಖಾಂತರ ಅನುದಾನಗಳು ಗ್ರಾಮ ಗ್ರಾಮದ ಅಭಿವೃದ್ಧಿ ಗೆ ಹಂಚಿದಾಗ ಪಕ್ಷ ಗಟ್ಟಿಯಾಗುತ್ತದೆ ಎಂಬ ನಂಬಿಕೆ ನನಗಿದೆ. ಸಂಘಟನೆಯ ದೃಷ್ಟಿಯಿಂದ ಪಕ್ಷದ ಯಾವುದೇ ವಿಚಾರಗಳಿದ್ದಾಗ ನಾಯಕರ ಜೊತೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಮಾಣಿಕ ಪ್ರಯತ್ನ ಮಾಡುವಂತೆ ಅವರು ತಿಳಿಸಿದರು. ಕೇಂದ್ರ ಸರಕಾರದ ಉತ್ತಮ‌ಆಡಳಿದ ವ್ಯವಸ್ಥೆ ಇಡೀ ಭಾರತವನ್ನು ಸದೃಢ ಭದ್ರ ರಾಷ್ಟ್ರವಾಗಿ ಮಾರ್ಪಾಡಾಗುತ್ತದೆ ಎಂದರು.

ಜಿಲ್ಲಾದ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಾತನಾಡಿದ ಅವರು ಅನೇಕರ ಬಲಿದಾನದ ಫಲವಾಗಿ ಕ್ಷೇತ್ರ ಬಿಜೆಪಿ ಸಂಘಟನಾತ್ಮಕ ವಾಗಿ ಬೆಳೆದಿದೆ. ಭವ್ಯಭಾರತದ ನಿರ್ಮಾಣದ ಉದ್ದೇಶದಿಂದ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಕಾರ್ಯಕರ್ತರಿಗೆ ಜವಬ್ದಾರಿ ಯನ್ನು ನೀಡಲಾಗುತ್ತಿದೆ.

ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಸಹಿತ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ಅವರು ಬಿಜೆಪಿ ಧ್ವಜವನ್ನು ದೇವಪ್ಪ ಪೂಜಾರಿ ಅವರಿಗೆ ಹಸ್ತಾಂತರ ಮಾಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

ನೂತನ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ದೇವಪ್ಪ ಪೂಜಾರಿ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಾದ ನನಗೆ ಜವಬ್ದಾರಿ ಪಕ್ಷ ನೀಡುತ್ತದೆ ಎಂಬ ನಿರೀಕ್ಷೆ ಇರಲಿಲ್ಲ. ಪಕ್ಷದ ಹಾಗೂ ರಾಜಕೀಯದಲ್ಲಿ ಹಲವು ಹುದ್ದೆಯನ್ನು ಅಲಂಕರಿಸಿ ಪ್ರಸ್ತುತ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಕ್ಷಣ , ನನಗೆ ನೀಡಿದ ಜವಬ್ದಾರಿ ಗೆ ಯಾವುದೇ ಚ್ಯುತಿ ಬಾರದ ರೀತಿಯಲ್ಲಿ ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸದ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಾರ್ಯದರ್ಶಿ ಗಳಾದ ರಾಮ್ ದಾಸ ಬಂಟ್ವಾಳ, ಕಸ್ತೂರಿ ಪಂಜ, ಸುದೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೇಶ್ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯಪೂಜಾರಿ , ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಬಂಟ್ವಾಳ ಬಿಜೆಪಿ ಕಾರ್ಯದರ್ಶಿ ಮೋನಪ್ಪ ದೇವಸ್ಯ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಪದಾಧಿಕಾರಿಗಳನ್ನು ಬಂಟ್ವಾಳ ವಿಧಾನ ಸಭಾ ಪರವಾಗಿ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು.

More from the blog

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...