Thursday, February 13, 2025

ಜವಾಬ್ದಾರಿ ಇದ್ದರೆ ಸಮಸ್ಯೆ ಬಗೆಹರಿಸಿ

ಯಾಕಿದು ಹೀಗೆ…? ಸ್ವಲ್ಪವಾದರೂ ಸ್ಥಳೀಯಾಡಳಿತಕ್ಕೆ ಜವಾಬ್ದಾರಿ ಬೇಡವೆ…? ಅಥವಾ ಜನಗಳ ಕುರಿತು ಔದಾಸೀನ್ಯವೆ…? ಸ್ಥಳೀಯ ಆಡಳಿತವಾಗಲಿ ಜನ ಪ್ರತಿನಿಧಿಗಳಾಗಲಿ ದಿವ್ಯ ಮೌನಿಗಳಾದ ಹಿನ್ನೆಲೆಯೇನು…? ಕಟ್ಟುವ ತೆರಿಗೆ ಹಣಕ್ಕಾದರೂ.,….ನಾಚಿಕೆಯಾಗಬೇಕು. ಇಷ್ಟೆಲ್ಲ ಯಾಕಂದ್ರೆ ಬಂಟವಾಳದ ಬಿ.ಸಿ.ರೋಡ್ ಕೈಕಂಬ ಸಮೀಪದ ಕಾರಂತ ಕೋಡಿಯಲ್ಲಿ ಶತಮಾನದಾದಿಯಿಂದ ಮಳೆನೀರು ಹೋಗುವ ತೋಡೊಂದರಲ್ಲಿ ಚರಂಡಿ ನೀರಿನ ಕೊಳಚೆಯನ್ನು ಧಾರಾಕಾರವಾಗಿ ಬಿಡಲಾಗುತ್ತಿದೆ. ಈ ಕುರಿತು ಕಳೆದ ಮೂರು ವರ್ಷಗಳಿಂದ ಸಂಬಂಧಿತ ಎಲ್ಲಾ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ದೂರು ಕೊಡಲಾಗಿದೆ. ಸ್ಥಳ ತನಿಖೆಯಾಗಿದೆ. ಭರವಸೆಯ ಮಹಾಪೂರವೇ ಹರಿದು ಬಂದಿದೆ. ಆದರೆ ಕೊಳಚೆ ನೀರು ನಿಂತಿಲ್ಲ ಮಾತ್ರವಲ್ಲ ಈ ಆಡಳಿತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸಮೀಪದ ಜಾಗವೊಂದರಲ್ಲಿ ಶೇಖರಗೊಳ್ಳುವಂತೆ ಮಾಡಿದೆ. ರಾಜಾರೋಷದಿಂದ ಎಲ್ಲಾ ರೀತಿಯ ಕೊಳಕನ್ನು ಹೊತ್ತು ತರುತ್ತಾ ಗಬ್ಬು ವಾಸನೆಯನ್ನು ಪ್ರಸರಿಸುತ್ತಾ ಇಲ್ಲಿನ ಹಲವಾರು ಬಾವಿಗಳ ನೀರನ್ನು ಕಲುಷಿತಗೊಳಿಸುತ್ತಿದೆ. ಸೊಳ್ಳೆಗಳ ಆವಾಸಸ್ಥಾನವಾಗಿ ಪರಿವರ್ತಿತವಾಗುತ್ತಿದೆ. ಈ ಕುರಿತು ಲೆಕ್ಕವಿಲ್ಲದಷ್ಟು ಸಲ ಸಂಬಧಿತರಿಗೆ ಮನವಿ ಸಲ್ಲಿಸಲಾಗಿದೆ.

ಮಾನವೀಯತೆ ಅಂತ ಇದ್ದರೆ, ಪ್ರಜಾ ಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಬಂಟ್ವಾಳ ಪುರಸಭೆಯ ಅಧಿಕಾರಿ ವರ್ಗ, ಅದೇ ರೀತಿ ಚುನಾಯಿತ ಸದಸ್ಯರು ಮತ್ತು ಸಂಬಂಧಿತ ಇತರ ಯಾರೇ ಆಗಲಿ ತಕ್ಷಣವೇ ಎಚ್ಚರಗೊಂಡು ಈ ಜ್ವಲಂತ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಿ ಎಂದು ಆಗ್ರಹ ಮಾಡಿದ್ದಾರೆ.

 

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...