Thursday, February 13, 2025

ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆಗಳ ಸಭೆ.

ಬಂಟ್ವಾಳ: ಕಂದಾಯ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಪಂಗಡದ ಪ್ರತಿಯೊಂದು ಕಡತಗಳಿಗೆ ಪರಿಶೀಲಿಸಿ ಕ್ರಮೈಗೊಳ್ಳಲಾಗುವುದು ಎಂದು ಹಿಂಬರಹ ನೀಡಲಾಗುತ್ತಿದೆ,ಆದರೆ ಉಳಿದ ಕಡತಗಳು ಸರಾಗವಾಗಿ ಪರಿಹಾರ ಕಾಣುತ್ತಿದೆ ಎಂಬ ಆರೋಪ ಇಂದು ಬಿಸಿರೋಡಿನ ತಾ.ಪಂ.ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆಗಳ ಸಭೆಯಲ್ಲಿ ಕೇಳಿಬಂತು.

ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಠ ಜಾತಿ, ಪಂಗಡ ಕುಂದು ಕೊರತೆ ಆಲಿಸುವ ಸಭೆ ಸಹಾಯಕ ಕಮೀಷನರ್ ಹರ್ಷವರ್ಧನ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಅವರು, ಪ್ರತಿ ಬಾರಿಯೂ ಸಭೆಯಲ್ಲಿ ಭರವಸೆಗಳ ಬಗ್ಗೆ ಮಾತನಾಡುವುಷ್ಟೇ ಅಲ್ಲ, ಅವುಗಳನ್ನು ಈಡೇರಿಸಲೂ ಕಾರ್ಯಕ್ರಮ ಆಗಬೇಕುಮ ಮಾರ್ಚ್ ಮೊದಲನೇ ವಾರ ತಹಸೀಲ್ದಾರ್ ನೇತೃತ್ವದಲ್ಲಿ ಸಭೆ ಕರೆಯಲಾಗುವುದು. ಆಗ ಪರಿಹಾರ ದೊರಕುತ್ತದೆ ಎಂದರು.

ತಹಸೀಲ್ದಾರ್ ಅರ್ಚನಾ ಭಟ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

ಡಿಸಿ ಮನ್ನಾ ಭೂಮಿಯ ಕುರಿತು ಪ್ರತಿ ಬಾರಿ ವರದಿಗಳು ಬರುತ್ತಿವೆ. ಅದರ ಕುರಿತ ಸೂಕ್ತ ನಿರ್ಧಾರಗಳು ಆದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಜನಾರ್ದನ ಚಂಡ್ತಿಮಾರ್ ಪ್ರಶ್ನೆಗೆ ಸಹಾಯಕ ಕಮೀಷನರ್ ಹರ್ಷವರ್ಧನ ಉತ್ತರಿಸಿದರು.

ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದಲ್ಲಿ ಹಿಂದೂ ರುದ್ರಭೂಮಿಗೆ ಸೂಕ್ತ ಜಾಗ ನಿಗದಿಯಾಗುವ ವಿಚಾರದ ಕುರಿತು ಗಡಿಗುರುತು ಆಗಿಲ್ಲ, ಮಂಜೂರಾತಿ ಆಗಿ ಇಷ್ಟು ವರ್ಷಗಳಾದರೂ ಇನ್ನೂ ಯಾಕೆ ಆಗಿಲ್ಲ ಎಂದು ಮುಖಂಡರು ಪ್ರಶ್ನಿಸಿದರು. ಮುಂದಿನ ತಹಶಿಲ್ದಾರರ ಸಭೆಯಲ್ಲಿ ಇದರ ಬೆಳವಣಿಗೆ ಮಾಹಿತಿ ನೀಡಬೇಕು. ಜಂಟಿ ಸ್ಥಳತನಿಖೆ ನಡೆಸಿ, ನಿಗದಿಯಾದ ಜಾಗವನ್ನು ಉಳಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸಹಾಯಕ ಕಮೀಚನರ್ ಹರ್ಷವರ್ಧನ ತಿಳಿಸಿದರು.

ಅಧಿಕಾರಿಗಳೇ ಸಭೆಯಲ್ಲಿ ಸರಿಯಾಗಿ ಹಾಜರಾಗದೇ ಇದ್ದರೆ ಸಭೆ ನಡೆಯುವುದು ಹೇಗೆ ಎಂದು ಮುಖಂಡ ಜನಾರ್ದನ ಬೋಳಂತೂರು ಹೇಳಿದರು. ಕಂದಾಯ ಇಲಾಖೆಯ ಮೇಲಂತಸ್ತಿಗೆ ಹೋಗುವ ದೃಷ್ಟಿಯಿಂದ ಆಳವಡಿಸಲಾದ ಲಿಪ್ಟ್ ಕೆಟ್ಟುಹೋಗಿರುವ ದೂರುನ್ನು ಆಲಿಸಿದ ಅಧಿಕಾರಿ ಮುಂದಿನ ಹತ್ತು ದಿನಗಳೊಳಗೆ ಸರಿಪಡಿಸುವಂತೆ ಸೂಚನೆ ನೀಡಿದರು.

ಮುಖಂಡರಾದವಪದ್ಮನಾಭ ನರಿಂಗಾನ ಅವರು ಹೃದಯಾಘಾತದಿಂದ ಮಂಗಳೂರಿಬ ಖಾಸಗಿ‌ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದು, ಅವರಿಗೆ ಸಂತಾಪವನ್ನು ಜನಾರ್ದನ ಚಂಡ್ತಿಮಾರ್ ಕೋರಿದರು. ಸಭೆಯಲ್ಲಿ ಮೌನ ಪ್ರಾರ್ಥನೆ ಸಲ್ಲಿಸಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...