Sunday, February 9, 2025

ಇನ್ನೋವಾ ಕಾರಿನಲ್ಲಿ ಕೇರಳ ಮೂಲದ ವ್ಯಕ್ತಿಯನ್ನು ಕೊಲೆಗೈದು ಆರೋಪಿಗಳು ಪರಾರಿ

ಬಂಟ್ವಾಳ : ಇನ್ನೋವಾ ಕಾರಿನಲ್ಲಿ ಚೂರಿಯಿಂದ ಇರಿದು ಕೊಲೆ ನಡೆಸಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಗ್ರಿ ಸಮೀಪದ ಶಾಂತಿ ನಗರ ಎಂಬಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ರಾಬರಿ ಮತ್ತು ಕೊಲೆ ಆರೋಪಿಯಾಗಿದ್ದು, ಕೇರಳ ಮೂಲದ ನಿವಾಸಿ ತಸ್ಲೀಮ್ (45) ಎಂದು ಗುರುತಿಸಲಾಗಿದೆ.
ಈತ ಕೇರಳದ ನಟೋರಿಯಸ್ ಜಿಯಾ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ ಈತ ಹಲವಾರು ಅಪರಾಧ ಹಿನ್ನಲೆವುಳ್ಳವನಾಗಿದ್ದ.

2019 ರಲ್ಲಿ ಬಂದರು ಠಾಣಾ ವ್ಯಾಪ್ತಿಯಲ್ಲಿ ಅರುಣ್ ಜ್ಯುವೆಲ್ಲರಿ ಶಾಪ್ ನಲ್ಲಿ ರಾಬರಿ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದುು, ಬಳಿಕ ಅತ ಗುಲ್ಬರ್ಗ ಜೈಲು ಸೇರಿದ್ದ, ಗುಲ್ಬರ್ಗ ಜೈಲಿನಿಂದ ಜಾಮೀನು ಮೂಲಕ ಬಿಡುಗಡೆಯಾಗಿದ್ದ.
ಬಿಡುಗಡೆಯಾದ ಕೂಡಲೇ ಈತನನ್ನು ಗ್ಯಾಂಗ್ ವೊಂದು ಕಾರಿನಲ್ಲಿ ಹಾಕಿಕೊಂಡು ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗುಲ್ಬರ್ಗ ಪೊಲೀಸ್ ಠಾಣೆಯಲ್ಲಿ ಈತನ ಕಿಡ್ನಾಪ್ ನಡೆಸಲಾಗಿದೆ ಎಂದು ಪ್ರಕರಣ ದಾಖಲಾಗಿತ್ತು.

2017 ರಲ್ಲಿ ಉಳ್ಳಾಲದಲ್ಲಿ ನಡೆದ ಖಾಲಿಯಾ ರಫೀಕ್ ಕೊಲೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ.

ಅತನನ್ನು ಕಾರಿನಲ್ಲಿ ಕುಳ್ಳಿರಿಸಿದ ಗ್ಯಾಂಗ್ ಅತನನ್ನು ಕಾರಿನಲ್ಲಿ ಕುತ್ತಿಗೆಗೆ ಹಗ್ಗ ಬಿಗಿದು ಬಳಿಕ ಹೊಟ್ಟೆಯ ಭಾಗಕ್ಕೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ.

ಕಾರಿನ ಹಿಂಬದಿಯ ಸೀಟಿನಲ್ಲಿಯೇ ಕೊಲೆ ಮಾಡಲಾಗಿದೆ. ಬೇರೆ ಯಾವುದೋ ಪ್ರದೇಶದಲ್ಲಿ ಕೊಲೆ ನಡೆಸಿ ಬಳಿಕ ಶಾಂತಿ ನಗರ ಎಂಬಲ್ಲಿ ರಸ್ತೆಯ ಬದಿಯಲ್ಲಿ ಗುಡ್ಡ ಪ್ರದೇಶದಲ್ಲಿ ಕಾರು ನಿಲ್ಲಿಸಲಾಗಿದೆ.
ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಕಾರು ನಿಂತ ಬಳಿಕ ಕಾರು ಅಲ್ಲಿಯೆ ಮಧ್ಯಾಹ್ನದವರಗೆ ಇದ್ದುದನ್ನು ಗಮನಿಸಿದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಖಾಲಿಯಾ ರಫೀಕ್ ಕೊಲೆಗೆ ಸೇಡು ತೀರಿಸಿಕೊಂಡಿದೆಯೋ ಅಥವಾ ಇನ್ನಾವುದೋ ಕಾರಣಕ್ಕೆ ಕೊಲೆ ನಡೆಸಿದೆಯಾ ಎಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.
ಸುಫಾರಿ ಕಿಲ್ಲರ್ ಗಳು ಈತನ ಕೊಲೆ ನಡೆಸಿರಬೇಕು ಎಂದು ಪೋಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಉಡುಪಿ ಎಸ್.ಪಿ.ವಿಷ್ಟುವರ್ದನ್, ಅಡಿಸನಲ್ ಎಸ್.ಪಿ.ವಿಕ್ರಂ ಅಮ್ಟೆ, ಮಂಗಳೂರು ಡಿ.ಸಿ.ಐ
ಬಿ. ಇನ್ಸ್ ಪೆಕ್ಟರ್ ಚೆಲುವರಾಜು, ಸ್ಥಳಕ್ಕೆ ಬೇಟಿ ನೀಡಿದ್ದಾರೆ.

ಸ್ಥಳದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್, ನಗರ ಠಾಣಾ ಎಸ್. ಐ.ಅವಿನಾಶ್, ಎ.ಎಸ್.ಐ‌.ಗಳಾದ ಜಯರಾಮ್ ರೈ, ರಮೇಶ್, ಶಿವರಾಮ್ ಸಿಬ್ಬಂದಿಗಳಾದ ಸುರೇಶ್, ಗಿರೀಶ್ ಉದಯ ರೈ, ವಿವೇಕ್, ಜನಾರ್ಧನ, ಬಸಪ್ಪ, ಕುಮಾರ್, ಚಾಲಕರಾದ ವಿಜಯ್, ಕಿರಣ್ ಮತ್ತಿತರರು ಬೇಟಿ ನೀಡಿದ್ದಾರೆ. ‌
ಸ್ಥಳಕ್ಕೆ ಬೆರಳಚ್ಚು ತಜ್ಞ ರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಶವವನ್ನು ಮಂಗಳೂರು ವೆನ್ಲಾಕ್ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...