Tuesday, January 27, 2026

ತುಳು ಕೂಟ, ಶ್ರೀರಕ್ತೇಶ್ವರಿ ದೇವಿ ದೇವಸ್ಥಾನ ಹಾಗೂ ಶಾಸಕ ರಾಜೇಶ್ ನಾಯ್ಕ್ ನೇತ್ರತ್ವದಲ್ಲಿ ಬ್ರಹ್ಮರಥಕ್ಕೆ ಸ್ವಾಗತ

ಬಂಟ್ವಾಳ: ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಕೊಡುಗೆಯಾಗಿ ನೀಡಲಿರುವ ಬ್ರಹ್ಮರಥ ಮಂಗಳವಾರ ಕದ್ರಿಯಿಂದ ಆಗಮಿಸಿದ ಬ್ರಹ್ಮ ರಥವನ್ನು ಬಿ.ಸಿ.ರೋಡಿನ ಕೈಕಂಬದಲ್ಲಿ ಅದ್ದೂರಿಯಿಂದ ಸ್ವಾಗತಿಸಲಾಯಿತು.
ಬಂಟ್ವಾಳ ತುಳುಕೂಟ, ಶ್ರೀರಕ್ತೇಶ್ವರಿ ದೇವಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ಅದ್ದೂರಿಯಾಗಿ ಸ್ವಾಗತಿಸಿ, ಬೀಳ್ಕೊಡಲಾಯಿತು. ಇದೇ ವೇಳೆ ರಥಕ್ಕೆ ಬೃಹದಾಕಾರದ ಹೂವಿನ ಮಾಲೆಯನ್ನು ಸಮಿರ್ಪಿಸಲಾಯಿತು. ತುಳುಕೂಟದ ವತಿಯಿಂದ ಚೆಂಡೆ, ಪೂರ್ಣಕುಂಭದಿಂದ ಸ್ವಾಗತಿಸಲಾಯಿತು.


ಈ ಸಂದರ್ಭ ತುಳುಕೂಟದ ಗೌರವಾಧ್ಯಕ್ಷ ಎ.ಸಿ, ಭಂಡಾರಿ, ಅಧ್ಯಕ್ಷ ಸುದರ್ಶನ್ ಜೈನ್, ಕಾರ್ಯದರ್ಶಿ ಎಚ್.ಕೆ.ನಯನಾಡು, ಸರಪಾಡಿ ಆಶೋಕ ಶೆಟ್ಟಿ, ಮುರಳೀಧರ ಶೆಟ್ಟಿ, ಸೀತಾರಾಮ ಶೆಟ್ಟಿ ಕಾಂತಾಡಿ, ಮಂಜು ವಿಟ್ಲ, ಪ್ರಕಾಶ್ ಶೆಟ್ಟಿ ಶ್ರೀಶೈಲ ತುಂಬೆ, ದೇವಪ್ಪ ಕುಲಾಲ್ ಪಂಜಿಕಲ್ಲು, ಸದಾನಂದ ಶೆಟ್ಟಿ, ನಾರಾಯಣ ಸಿ.ಪೆರ್ನೆ, ಸುಕುಮಾರ್ ಕುಲಾಲ್, ಪ್ರವೀಣ.ಬಿ., ಉದ್ಯಮಿ ರಾಕೇಶ್ ಮಲ್ಲಿ, ಶ್ರೀ ರಕ್ತೇಶ್ವರೀ ದೇವಸ್ಥಾನದ ಆಡಳಿತ ಸಮಿತಿಯ ರಾಜೇಶ್ ಎಲ್.ನಾಯಕ್, ಲೋಕನಾಥ ಶೆಟ್ಟಿ, ಬಿ.ಮೋಹನ್, ಸತೀಶ್ ಭಂಡಾರಿ, ರಾಜೇಶ್ ಬಿ.ಸಿ.ರೋಡ್, ಶಿವಶಂಕರ್ ಬಿ.ಸಿ.ರೋಡ್, ವಕೀಲ ಆಶ್ವನಿಕುಮಾರ್ ರೈ, ಉಮೇಶ್, ಪುರಸಭಾ ಸದಸ್ಯ ಗೋವಿಂದ ಪ್ರಭು, ಬಿಜೆಪಿ ಪ್ರಮುಖರಾದ ದೇವದಾಸ ಶೆಟ್ಟಿ, ರಾಮದಾಸ್ ಬಂಟ್ವಾಳ, ಚೆನ್ನಪ್ಪ ಆರ್. ಕೋಟ್ಯಾನ್, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಪುಪ್ಪರಾಜ್ ಚೌಟ, ರಮಾನಾಥ ರಾಯಿ,ಗಣೇಶ್ ರೈ ಮಾಣಿ, ತಾಪಂ ಸದಸ್ಯ ಪ್ರಭಾಕರ ಪ್ರಭು ಮೊದಲಾದವರಿದ್ದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...