Saturday, July 12, 2025

ಬಿಸಿರೋಡು- ಜಕ್ರಿಬೆಟ್ಟು ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ

ಬಂಟ್ವಾಳ: ಬಿಸಿರೋಡು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಿಂದ ಜಕ್ರಿಬೆಟ್ಟು ವರಗೆ ಅಗಲೀಕರಣಗೊಂಡು ರಸ್ತೆಗೆ ಕಾಂಕ್ರೀಟ್ ಕಾಮಗಾರಿ ಇಂದು ಆರಂಭವಾಗಿದೆ.
150 ಕೋಟಿ ವೆಚ್ಚದಲ್ಲಿ ಬಿಸಿರೋಡು – ಕೊಟ್ಟಿಗಾರ ರಸ್ತೆಯ ಬಿಸಿರೋಡಿನಿಂದ ಪುಂಜಾಲಕಟ್ಟೆ ವರೆಗೆ 20 ಕಿಮೀ ಉದ್ದದ ರಸ್ತೆಯ ಕಾಮಗಾರಿ ಭರದಿಂದ ಸಾಗುತ್ತಿದೆ. ಬಿಸಿರೋಡಿನ ಬ್ರಹ್ಮಶ್ರೀನಾರಾಯಣ ಗುರುಮಂದಿರದಿಂದ ಜಕ್ರಿಬೆಟ್ಟು ವರೆಗೆ 4 ಕಿ.ಮೀ ಉದ್ದದ 7.30 ಮೀ ಅಗಲದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಓಷಿಯನ್ ಕನ್ಸಟ್ರಕ್ಸನ್ ಗುತ್ತಿಗೆ ವಹಸಿಕೊಂಡಿದ್ದು, ಕಾಮಗಾರಿ ವೇಗದಿಂದ ಸಾಗುತ್ತಿದೆ. ರಸ್ತೆಯ ಬದಿಯ ಮರಗಳ ತೆರವುಗೊಳಿಸುವ ಹಾಗೂ ನೀರಿನ ಪೈಪ್, ವಿದ್ಯುತ್ ಕಂಬಗಳ ತೆರವು ಕಾರ್ಯಗಳು ಈಗಾಗಲೇ ನಡೆದಿವೆ.


ಮಳೆಗಾಲದಲ್ಲಿ ನೀರು ರಸ್ತೆ ಬದಿಯ ನೀರು ಹರಿದುಹೋಗಲು ಅಲ್ಲಲ್ಲಿ ಸಣ್ಣ ಸಣ್ಣ ಸೇತುವೆಗಳ ಕಾಮಗಾರಿ ನಡೆಯುತ್ತಿದೆ. ರಸ್ತೆಗೆ ಪ್ರಥಮ ಹಂತದ ಜಲ್ಲಿಕಲ್ಲುಗಳನ್ನು ಹಾಕಲಾಗಿತ್ತು. ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಳೆಗಾಲದ ಮೊದಲು ಈ ಕಾಮಗಾರಿ ಪೂರ್ಣಗೊಳಿಸುವ ಪ್ರಯತ್ನ ಗುತ್ತಿಗೆದಾರರು ಮಾಡುತ್ತಿದ್ದು, ಕಾಮಗಾರಿ ಭರದಿಂದ ನಡೆಯುತ್ತಿದೆ.

ಪ್ರಸ್ತುತ ಬಿಸಿರೋಡು- ಜಕ್ರಿಬೆಟ್ಟು ವರೆಗೆ ಕಾಂಕ್ರೀಟ್ ಕಾಮಗಾರಿಗೆ ಇಂದು ಮಧ್ಯಾಹ್ನದ ವೇಳೆ ಚಾಲನೆ ನೀಡಲಾಯಿತು. ಮುಂದಿನ 20 ದಿನಗಳಲ್ಲಿ ಕಾಂಕ್ರೀಟ್ ಕಾಮಗಾರಿಯನ್ನು ಮುಗಿಸಿ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಎ.ಇ.ಗಳಾದ ಕೇಶವ ಮೂರ್ತಿ, ಕೀರ್ತಿ ಅಮೀನ್ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...