Friday, July 11, 2025

ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ಆಧುನಿಕ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಸಂಶೋಧನಾತ್ಮಕ ಆಸಕ್ತಿ ಕಡಿಮೆಯಾಗುತ್ತಿದೆ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಲ್ಲಿಯೂ ತಮಗೆ ಅರಿವಿಲ್ಲದಂತೆ ಸಂಶೋಧನಾತ್ಮಕ ಗುಣಗಳು ಸುಪ್ತವಾಗಿರುತ್ತದೆ. ಇದನ್ನು ಹೊರತರುವಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಮುತುವರ್ಜಿ ವಹಿಸಿಬೇಕಾಗುತ್ತದೆ.
ನಮ್ಮ ಯುವಜನತೆ ಈ ಬಗ್ಗೆ ಕಾರ್ಯತತ್ಪರರಾಗಬೇಕು. ಸಾಂಪ್ರದಾಯಿಕ ಕೃಷಿ ಪದ್ದತಿಯಲ್ಲೂ ಸಂಶೋಧನಾತ್ಮಕ ಗುಣವನ್ನು ನಾವು ಗುರುತಿಸಿ ಅದರ ಮಟ್ಟವನ್ನು ಇನ್ನಷ್ಟು ಸುಧಾರಿಸಬೇಕು ಎಂದು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿಯ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ| ಸಿದ್ದರಾಜು ಎಂ ಎನ್ ನುಡಿದರು. ಅವರು ಇತ್ತೀಚೇಗೆ ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ಪ್ರಾಣಿಶಾಸ್ತ್ರ ವಿಭಾಗ ಹಾಗೂ ಇಂಚರ ಜಂಟಿಯಾಗಿ ಆಯೋಜಿಸಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು
ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲೆ ಡಾ| ಹೆಚ್ ಆರ್ ಸುಜಾತ ಸಂಶೋಧನೆಯ ಮಹತ್ವ ಮತ್ತು ನಮ್ಮ ದೈನಂದಿನ ಕಾರ್ಯಗಳಲ್ಲಿ ಅದರ ಉಪಯುಕ್ತತೆ ಬಗ್ಗೆ ವಿವರಿಸಿದರು. ಉಪನ್ಯಾಸ ಕಾರ್ಯಕ್ರಮದ ಸಂಯೋಜಕಿ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ  ಡಾ| ದಾಕ್ಷಾಯಿಣಿ ಅತಿಥಿಯನ್ನು ಪರಿಚಯಿಸಿದರು. ನೇಚರ್ ಕ್ಲಬ್ ಇಂಚರದ ಕಾರ್ಯದರ್ಶಿ ಶ್ರೀಲಕ್ಷಿ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಸ್ಪೂರ್ತಿ ಹಾಗು ಪ್ರಿಯಾಂಕ ಪ್ರಾರ್ಥಿಸಿದರು. ಇಂಚರದ ಜೊತೆ ಕಾರ್ಯದರ್ಶಿಯಾದ ಶರತ್ ಕುಮಾರ್ ವಂದಿಸಿದರು. ವಿಜ್ಞಾನ ವಿಭಾಗದ ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದರು. ಅಂತಿಮ ಬಿ.ಎಸ್ಸಿ ವಿದ್ಯಾರ್ಥಿನಿ ರಕ್ಷಿತಾ ರೈ ಕಾರ್ಯಕ್ರಮ ನಿರೂಪಿಸಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...