Sunday, February 1, 2026

ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ಆಧುನಿಕ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಸಂಶೋಧನಾತ್ಮಕ ಆಸಕ್ತಿ ಕಡಿಮೆಯಾಗುತ್ತಿದೆ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಲ್ಲಿಯೂ ತಮಗೆ ಅರಿವಿಲ್ಲದಂತೆ ಸಂಶೋಧನಾತ್ಮಕ ಗುಣಗಳು ಸುಪ್ತವಾಗಿರುತ್ತದೆ. ಇದನ್ನು ಹೊರತರುವಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಮುತುವರ್ಜಿ ವಹಿಸಿಬೇಕಾಗುತ್ತದೆ.
ನಮ್ಮ ಯುವಜನತೆ ಈ ಬಗ್ಗೆ ಕಾರ್ಯತತ್ಪರರಾಗಬೇಕು. ಸಾಂಪ್ರದಾಯಿಕ ಕೃಷಿ ಪದ್ದತಿಯಲ್ಲೂ ಸಂಶೋಧನಾತ್ಮಕ ಗುಣವನ್ನು ನಾವು ಗುರುತಿಸಿ ಅದರ ಮಟ್ಟವನ್ನು ಇನ್ನಷ್ಟು ಸುಧಾರಿಸಬೇಕು ಎಂದು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿಯ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ| ಸಿದ್ದರಾಜು ಎಂ ಎನ್ ನುಡಿದರು. ಅವರು ಇತ್ತೀಚೇಗೆ ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ಪ್ರಾಣಿಶಾಸ್ತ್ರ ವಿಭಾಗ ಹಾಗು ಇಂಚರ ಜಂಟಿಯಾಗಿ ಆಯೋಜಿಸಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು
ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲೆ ಡಾ| ಹೆಚ್ ಆರ್ ಸುಜಾತ ಸಂಶೋಧನೆಯ ಮಹತ್ವ ಮತ್ತು ನಮ್ಮ ದೈನಂದಿನ ಕಾರ್ಯಗಳಲ್ಲಿ ಅದರ ಉಪಯುಕ್ತತೆ ಬಗ್ಗೆ ವಿವರಿಸಿದರು .ಉಪನ್ಯಾಸ ಕಾರ್ಯಕ್ರಮದ ಸಂಯೋಜಕಿ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಡಾ| ದಾಕ್ಷಾಯಿಣಿ ಅತಿಥಿಯನ್ನು ಪರಿಚಯಿಸಿದರು. ನೇಚರ್ ಕ್ಲಬ್ ಇಂಚರದ ಕಾರ್ಯದರ್ಶಿ ಶ್ರೀಲಕ್ಷಿ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಸ್ಪೂರ್ತಿ ಹಾಗು ಪ್ರಿಯಾಂಕ ಪ್ರಾರ್ಥಿಸಿದರು. ಇಂಚರದ ಜೊತೆ ಕಾರ್ಯದರ್ಶಿಯಾದ ಶರತ್ ಕುಮಾರ್ ವಂದಿಸಿದರು. ವಿಜ್ಞಾನ ವಿಭಾಗದ ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದರು .ಅಂತಿಮ ಬಿ.ಎಸ್ಸಿ ವಿದ್ಯಾರ್ಥಿನಿ ರಕ್ಷಿತಾ ರೈ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...