Monday, January 26, 2026

ಕೊರೊನ ಭೀತಿ ನಡುವೆಯೂ ಮದ್ಯ ಪ್ರೀಯರಿಗೆ ಸಿಹಿ ಸುದ್ದಿ

ಬಂಟ್ವಾಳ: ಕರೋನಾ ಎಂಬ ಮಹಾಮಾರಿ ದೇಶಕ್ಕೆ ವಕ್ಕರಿಸಿಕೊಂಡ ಹಿನ್ನೆಲೆ ಕೇಂದ್ರ ಸರ್ಕಾರ ದೇಶದಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದೆ.
ಇದರಿಂದಾಗಿ ಇಡೀ ದೇಶ ಸ್ಥಬ್ಧವಾಗಿದ್ದು, ವ್ಯಾಪಾರ ವಹಿವಾಟು ಸಂಪೂರ್ಣ ಕಂಗೆಟ್ಟಿದೆ.

ರಾಜ್ಯದಲ್ಲೂ ಲಾಕ್ ಡೌನ್ ಜಾರಿಯಲ್ಲಿದ್ದು, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಲಾಕ್ ಡೌನ್ ನಿಂದಾಗಿ ಮದ್ಯದಂಗಡಿಗಳು ಬಂದ್ ಆಗಿದ್ದು, ಕುಡಿತದ ಚಟಕ್ಕೆ ಬಿದ್ದ ಹಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಹಿನ್ನೆಲೆ ಮದ್ಯಕ್ಕಾಗಿ ಚಡಪಡಿಸುತ್ತಿರುವವರಿಗೆ ಭರ್ಜರಿ ಸುದ್ದಿಯೊಂದು ಇದೆ.

ಏ. 14 ರ ಬಳಿಕವೂ ಲಾಕ್ಡೌನ್ ಮುಂದುವರೆದರೆ, ಪ್ರತಿನಿತ್ಯ ಮೂರು ಗಂಟೆಗಳ ಕಾಲ ಮದ್ಯದಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಲಾಕ್ ಡೌನ್ ನಿಂದಾಗಿ ರಾಜ್ಯದ ಪ್ರಮುಖ ಆದಾಯ ಮೂಲವಾಗಿರುವ ಮದ್ಯ ಮಾರಾಟಕ್ಕೆ ಹೊಡೆತ ಬಿದ್ದಿದ್ದು, ಈ ಹಿನ್ನಲೆ ಸರ್ಕಾರ ಈ ನಿರ್ಧಾರಕ್ಕೆ ಬರಲಿದೆ ಎನ್ನಲಾಗುತ್ತಿದೆ.

ಈಗಾಗಲೇ ಈ ಕುರಿತ ಪ್ರಸ್ತಾವನೆಯನ್ನು ಅಬಕಾರಿ ಇಲಾಖೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲಿಕೆಯಾಗಿದ್ದು, ಇದಕ್ಕೆ ಅನುಮತಿ ದೊರೆತರೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮದ್ಯದಂಗಡಿಗಳು ತೆರೆದಿರಲಿವೆ. ಏಪ್ರಿಲ್ ಹದಿನಾಲ್ಕರ ನಂತರವೂ ಲಾಕ್ ಡೌನ್ ಮುಂದುವರೆದರೆ ಮಾತ್ರ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...