Sunday, February 9, 2025

ಬ್ಯಾರಿ ನಿಖಾಹ್ ಹೆಲ್ಪ್‌ಲೈನ್‌ನ ಕಾರ್ಯ ಶ್ಲಾಘನೀಯ: ರಿಯಾಝ್ ಫರಂಗಿಪೇಟೆ

ಬಂಟ್ವಾಳ: ಬ್ಯಾರಿ ನಿಖಾಹ್ ಹೆಲ್ಪ್‌ಲೈನ್ ಇದರ ಕಾರ್ಯಸೂಚಿ ಹಾಗೂ ಮಾಹಿತಿಯನ್ನೊಳಗೊಂಡ ಕರಪತ್ರ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ ಸುಲ್ತಾನ್ ಕಾಂಪ್ಲೆಕ್ಸ್‌ನಲ್ಲಿ ಬುಧವಾರ ಸಂಜೆ ನಡೆಯಿತು. ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರು ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ, ಬಡ ಯುವಕ-ಯುವತಿಯರ ಸುಂದರ ವೈವಾಹಿಕ ಜೀವನಕ್ಕೆ ಆಸರೆಯಾಗಿರುವ ಬ್ಯಾರಿ ನಿಖಾಹ್ ಹೆಲ್ಪ್‌ಲೈನ್‌ನ ಕಾರ್ಯ ಶ್ಲಾಘನೀಯ. ಯವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸುಮಾರು 285 ನವ ವಧುವಿಗೆ ಹಾಗೂ 56 ವಿಚ್ಛೇಧಿತ ವಧುವಿಗೆ ವೈವಾಹಿಕ ಸಂಬಂಧವನ್ನು ಕಲ್ಪಿಸಿರುವುದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಪ್ರಚಾರ ಹಾಗೂ ಆಡಂಬರಗಳಿಲ್ಲದ ತಂಡದ ಕಾರ್ಯ ಸಮಾಜದಲ್ಲಿ ಇನ್ನಷ್ಟು ಯಶಸ್ವಿಯಾಗಲಿ. ಇದಕ್ಕೆ ಪ್ರತಿಯೊಂದು ಜಮಾಅತ್ ಕೈಜೋಡಿಬೇಕಾಗಿದೆ ಎಂದರು.

ಕ್ಲೋತ್ ಬಾಕ್ಸ್ ಅಳವಡಿಕೆ, ರಂಜಾನ್ ಕಿಟ್ ವಿತರಣೆ, ರೋಗಿಗಳಿಗೆ ಆಹಾರ ಹಾಗೂ ಉಡುಪುಗಳ ವಿತರಣೆ, ವೈವಾಹಿಕ ಸಂಬಂಧ, ನೆರೆ ಸಂತ್ರಸ್ತರಿಗೆ ವಸ್ತ್ರ ವಿತರಣೆ, ವಸತಿ ಶಾಲೆಯ ಮಕ್ಕಳಿಗೆ ಇಫ್ತಾರ್ ಕೂಟ ಹೀಗೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ಬ್ಯಾರಿ ನಿಖಾಹ್ ಹೆಲ್ಪ್ ತೊಡಗಿಕೊಂಡಿರುವುದು ಪುಣ್ಯದ ಕಾರ್ಯವಾಗಿದೆ ಎಂದು ಹೇಳಿದರು.ಹನೀಫ್ ಮುಸ್ಲಿಯಾರ್ ಪರ್ಲಿಯಾ ದುಆಃ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬ್ಯಾರಿ ನಿಖಾಹ್ ಹೆಲ್ಪ್‌ಲೈನ್‌ನ ಪ್ರಧಾನ ಕಾರ್ಯದರ್ಶಿ ಮಜೀದ್ ಬಿಕರ್ನಕಟ್ಟೆ ಅಧ್ಯಕ್ಷತೆ ವಹಿಸಿ, ಸಂಘದ ಮುಂದಿನ ಯೋಜನೆಗಳನ್ನು ಹಾಗೂ ಕಾರ್ಯಸೂಚಿಯ ಬಗ್ಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಮುಸ್ಲಿಂ ಸಮಾಜ ಬಂಟ್ವಾಳ ಇದರ ಅಧ್ಯಕ್ಷ ಇಬ್ನು ಅಬ್ಬಾಸ್, ಉದ್ಯಮಿ ಹೈದರ್ ಎಸ್.ಎಚ್. ಉಪಸ್ಥಿತರಿದ್ದರು. ಬ್ಯಾರಿ ನಿಖಾಹ್ ಹೆಲ್ಪ್‌ಲೈನ್ ಸದಸ್ಯ ರಹಿಮಾನ್ ಮಠ ನಿರೂಪಿಸಿದರು.



More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...