Friday, June 27, 2025

ಜ.29-31: ಶ್ರೀ ಅನ್ನಪೂರ್ಣೆಶ್ವರಿ ದೇವಿ ಸನ್ನಿಧಿಯಲ್ಲಿ ವಾರ್ಷಿಕ ಜಾತ್ರ ಮಹೋತ್ಸವ

ಬಿ.ಸಿ.ರೋಡ್: ಪೊಲೀಸ್ ಲೇನ್ ನ ಶ್ರೀ ಅನ್ನಪೂರ್ಣೆಶ್ವರಿ ನಾಗದೇವರ ದೇವಸ್ಥಾನ ಟ್ರಸ್ಟ್ ನಲ್ಲಿ ಜ.30(ಗುರುವಾರ) ಶ್ರೀ ಅನ್ನಪೂರ್ಣೆಶ್ವರಿ ದೇವಿ ಸನ್ನಿಧಿಯಲ್ಲಿ ಕೀಕಾಂಗೋಡು ಬ್ರಹ್ಮಶ್ರೀ ಅರವತ್ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಜಾತ್ರ ಮಹೋತ್ಸವ ಜರಗಲಿದೆ. ಜ.29 ರಂದು ಬುಧವಾರ ರಾತ್ರಿ ವಾಸ್ತು ಹೋಮ, ಜ.30 ರಂದು ಬೆಳಗ್ಗೆ 7 ಗಂಟೆಗೆ ಪ್ರಾರ್ಥನೆ, ಗಣಪತಿ ಹೋಮ, 7.30 ರಿಂದ ನವ ಚಂಡಿಕಾ ಹೋಮ ನಂತರ ಬೆಳಿಗ್ಗೆ 11 ಗಂಟೆಗೆ ವಿಶೇಷ ನಾಗಾರಾಧನೆ, 11.30ಕ್ಕೆ ನವ ಚಂಡಿಕಾ ಹೋಮದ ಪೂರ್ಣಾಹುತಿ, 12 ಗಂಟೆಗೆ ಮಹಾಪೂಜೆ ನಂತರ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 5 ರಿಂದ ಬಿ.ಸಿ.ರೋಡ್ ಅನ್ನಪೂರ್ಣೆಶ್ವರಿ ಭಕ್ತ ವೃಂದದವರಿಂದ ಭಜನಾ ಕಾರ್ಯಕ್ರಮ, ರಾತ್ರಿ 7 ಗಂಟೆಗೆ ಮಹಾಪೂಜೆ, ನಂತರ ದೇವರ ಬಲಿ, ಬಟ್ಟಲು ಕಾಣಿಕೆ ಜರಗಲಿದೆ. ಜ.31 ರಂದು ಶುಕ್ರವಾರ ರಾತ್ರಿ 7.30ಕ್ಕೆ ರಂಗಪೂಜೆ, ನಂತರ ಗುಳಿಗ ದೈವದ ವರ್ಷಾವಧಿ ಕೋಲ ಜರಗಲಿದೆ ಎಂದು ತಿಳಿಸಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...