Friday, February 6, 2026

ಬಿ ಸಿ ರೋಡ್: ಯಕ್ಷಗಾನ ಬಯಲಾಟ

ಬಿ.ಸಿ ರೋಡ್: ಇಲ್ಲಿನ ಸ್ಪರ್ಶ ಕಲಾಮಂದಿರದ ವಠಾರದಲ್ಲಿ ‘ತುಡರ್ ಯಕ್ಷಮಿತ್ರೆರ್’ ಬಿ.ಸಿ ರೋಡ್ ಇವರ 7ನೇ ವರ್ಷದ ಶ್ರೀ ಅನಂತ ಪದ್ಮನಾಭ ಯಕ್ಷಗಾನ ಮಂಡಳಿ ಪೆರಡೂರ್ ಇವರ ‘ಸೂರ್ಯಸಂಕ್ರಾಂತಿ’ ಎಂಬ ಯಕ್ಷಗಾನ ಬಯಲಾಟ ನಡೆಯಿತು.

ಇದರ ಸಭಾಕಾರ್ಯಕ್ರಮವನ್ನು ಅತಿಥಿಗಳಾದ ಸುಭಾಶ್ಚಂದ್ರ ಜೈನ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಂಟ್ವಾಳ ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್ ವಹಿಸಿ, ಮಾತನಾಡಿ, ಕರಾವಳಿ ಗಂಡುಕಲೆ ಯಕ್ಷಗಾನ ಅದರದ್ದೇ ಆದ ವಿಶೇಷತೆ ಹೊಂದಿದ್ದು, ಸಂಗೀತ, ನಾಟ್ಯ, ಮಾತುಗಾರಿಕೆ ಜೊತೆಯಲ್ಲಿ ಮೇಳೈಸಿದಾಗ ನೋಡುವ ಪ್ರೇಕ್ಷಕರ ಕಣ್ಣಿಗೆ ಹಬ್ಬವಾಗುತ್ತದೆ. ಇಂತಹ ಕಲೆಯನ್ನು ಉಳಿಸಿ ಬೆಳೆಸುವ ಸಲುವಾಗಿ ಹುಟ್ಟಿಕೊಂಡ ಸಂಸ್ಥೆ ನಿಜವಾಗಿಯೂ ಅಭಿನಂದನೀಯ. ನಾವೆಲ್ಲರೂ ಇಂತಹ ಸಂಸ್ಥೆಗಳಿಗೆ ಪ್ರೋತ್ಸಾಹಿಸುವ ಮೂಲಕ ಯಕ್ಷಗಾನ ಕಲೆಯನ್ನು ಪ್ರದರ್ಶಿಸಲು ಸಹಕರಿಸೋಣ. ತುಡರ್ ಯಕ್ಷಮಿತ್ರೇರ್ ಇನ್ನಷ್ಟು ದಿನ ಕಲಾಸೇವೆಗೈಯಲಿ ಎಂದು ಶುಭ ಹಾರೈಸಿದರು.

ಪ್ರತಿವರ್ಷದಂತೆ ಈ ವರ್ಷವೂ ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ರನ್ನು ವೇದಿಕೆಯಲ್ಲಿ ಫಲ ಪುಷ್ಪ ತಾಂಬೂಲ ನೀಡಿ, ಹಾರಹಾಕಿ, ಪೇಟ ತೊಡಿಸಿ, ಗೌರವ ಸಂಭಾವನೆ ನೀಡಿ ಗೌರವಿಸಲಾಯಿತು.

ಅತಿಥಿಗಳಾದ ಗಂಗಾಧರ ಶೇರಾ, ಸುಭಾಸಚಂದ್ರ ಜೈನ್, ಉಮೇಶ್ ರೆಂಜೋಡಿ ಸಮಯೋಚಿತವಾಗಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ನಾರಾಯಣ್ ಸಿ. ಪೆರ್ನೆ ಸ್ವಾಗತಿಸಿ, ಗೌರವಾಧ್ಯಕ್ಷ ಶೇಷಪ್ಪ ಮಾಸ್ಟರ್ ಪ್ರಸ್ತಾಪಿಸಿದರು. ಕಾರ್ಯದರ್ಶಿ ನೇಸರ ವಳವೂರ್ ವಂದಿಸಿ, ಕವಿತಾ ಯಾದವ್ ನಿರೂಪಿಸಿದರು. ಪಧಾಧಿಕಾರಿಗಳಾದ ಉಮೇಶ್ ಮೂಲ್ಯ, ತಿಮ್ಮಪ್ಪ, ಸದಾನಂದ ಶೆಟ್ಟಿ, ರಮೇಶ್, ದಿವಾಕರ ದಾಸ್, ತಿಲಕರಾಜ್ ಸಹಕರಿಸಿದರು. ನಂತರ ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಿತು.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...