ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಪೌರತ್ವ ಸಮರ್ಥನಾ ಸಮಾವೇಶಕ್ಕೆ ಬೆಂಬಲಿಸಿ ಅಂಗಡಿ ಮಾಲಿಕರು ಅಘೋಷಿತ ಬಂದ್ ಮಾಡಿದರು. ಸ್ವಯಂ ಪ್ರೇರಿತವಾಗಿ ಅಂಗಡಿ ಮಾಲಿಕರು ಮದ್ಯಾಹ್ನದ ಬಳಿಕ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಪೌರತ್ವ ಕಾಯ್ದೆಗೆ ಬೆಂಬಲ ಸೂಚಿಸಿ, ಸಮಾವೇಶಕ್ಕೆ ತೆರಳಿದ್ದಾರೆ.
ಪೌರತ್ವ ಕಾಯ್ದೆ ಬಗ್ಗೆ ಜನರಿಗೆ ಸಮಗ್ರ ಮಾಹಿತಿ ತಿಳಿಸುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದಾರೆ.

