Tuesday, February 11, 2025

ಫೆ. 9 : ಬಿ.ಸಿ.ರೋಡ್ ಸ್ಪರ್ಶಾ ಕಲಾ ಮಂದಿರದಲ್ಲಿ ಡಿಜಿಟಲ್ ಪ್ರಿಂಟ್ ಎಕ್ಸ್ಪೋ

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಪ್ರಿಂಟರ್ಸ್ ಅಸೋಸಿಯೇಷನ್ ವತಿಯಿಂದ ಫೆಬ್ರವರಿ 9ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಡಿಜಿಟಲ್ ಎಕ್ಸ್‌ಪೋ ಕಾರ್ಯಕ್ರಮ ನಡೆಯಲಿದೆ. ಲೆಟರ್ ಪ್ರೆಸ್‌ನಿಂದ ಆರಂಭವಾಗಿ ಮುಂದೆ ಆಫ್‌ಸೆಟ್ ಮುದ್ರಣಕ್ಕೆ ತೆರೆದು ಪ್ರಸ್ತುತ ಡಿಜಿಟಲ್ ಯುಗಕ್ಕೆ ತೆರೆದುಕೊಂಡಿರುವ ಮುದ್ರಣ ರಂಗ ಬದಲಾವಣೆಯ ನಿಟ್ಟಿನಲ್ಲಿ ಮುಂದುವರಿಯುತ್ತಾ ಇದೆ. ಈ ಸಂದರ್ಭ ಮುದ್ರಣಕಾರರಿಗೆ ಮತ್ತು ಮುದ್ರಣ ರಂಗದಲ್ಲಿ ಆಸಕ್ತಿ ಇರುವರಿಗೆ ವಿವಿಧ ಶೈಲಿಯ ಡಿಜಿಟಲ್ ಯಂತ್ರಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯನ್ನು ಈ ಕಾರ್ಯಕ್ರಮದಲ್ಲಿ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇದು ವಿನೂತನ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮವನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉದ್ಘಾಟಿಸಲಿದ್ದಾರೆ. ಎಕ್ಸ್ಪೋದಲ್ಲಿ ಕೆನಾನ್, ಕೊನಿಕಾ, ಬ್ರದರ್, ಗೋದ್ರೆಜ್, ರೀಸೋ ಕಂಪೆನಿಯ ಉತ್ಪನ್ನಗಳು, ಹೆಚ್‌ಪಿ, ಡುಪ್ಲೋ, ಸೆಲ್ಕೋ ಕಂಪೆನಿಯ ಸೋಲಾರ್ ಜೆರಾಕ್ಸ್ ಹಾಗೂ ಸೋಲಾರ್ ಉತ್ಪನ್ನಗಳು ಪ್ರದರ್ಶನಗೊಳ್ಳಲಿದೆ. ಈ ಕಾರ್ಯಕ್ರಮದ ಸಹಯೋಗದಲ್ಲಿ ಶ್ರೀ ಮಾರುತಿ ಎಂಟರ್‌ಪ್ರೈಸಸ್ ಮೈಸೂರು, ಕ್ವಾಲಿಟಿ ಕಂಪ್ಯೂಟರ್‍ಸ್ ಬೆಂಗಳೂರು-ಪೂನಾ, ಮಂಗಳೂರಿನ ಶ್ರೀ ಭಾರತಿ ಸಿಸ್ಟಮ್ಸ್, ಅಡ್ವಾನ್ಸ್ ಕುಂದಾಪುರ-ಮಂಗಳೂರು, ಥೋನ್ಸೆ ಎಂಟರ್‌ಪ್ರೈಸಸ್, ಸೆಲ್ಕೋ ಸೋಲಾರ್ ಸಂಸ್ಥೆಗಳು, ಅನಿಲ್ ಕಂಪ್ಯೂಟರ್‍ಸ್ ವಹಿಸಲಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಎಲ್ಲಾ ಮುದ್ರಣಾಕಾರರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಬಹುದು ಹಾಗೂ ಮುದ್ರಣಾಲಯದ ಬಗ್ಗೆ ಆಸಕ್ತಿ ಇರುವ ಎಲ್ಲರಿಗೂ ಮುಕ್ತ ಪ್ರವೇಶವಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಈಶ್ವರ ಕುಮಾರ್ ಭಟ್ ಮತ್ತು ಕಾರ್ಯದರ್ಶಿ ಯಾದವ ಕುಲಾಲ್ ಬಿ.ಸಿ.ರೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...