Friday, February 7, 2025

ಕರಾವಳಿ ಕಲೋತ್ಸವಕ್ಕೆ ಬಿ.ಸಿ.ರೋಡಿನಲ್ಲಿ ಸಕಲ ಸಿದ್ಧತೆ

ಬಂಟ್ವಾಳ: ಬಂಟ್ವಾಳ, ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ವತಿಯಿಂದ ಡಿ.21ರಿಂದ 31ರ ವರೆಗೆ ನಡೆಯುವ ಕರಾವಳಿ ಕಲೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
ಕರಾವಳಿ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಕರಾವಳಿ ಕಲೋತ್ಸವ ಮೈದಾನದಲ್ಲಿ ಸಿದ್ಧತಾ ಸಭೆ ಜರುಗಿತು.
ಕಾರ್ಯಕ್ರಮದ ತಯಾರಿ ಬಗ್ಗೆ ಸ್ವಾಗತ ಸಮಿತಿ ಮತ್ತು ವಿವಿಧ ಸಮಿತಿಗಳ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಜವಾಬ್ದಾರಿಗಳನ್ನು ಹಂಚಲಾಯಿತು. ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ಮೋಹನದಾಸ್ ಕೊಟ್ಟಾರಿ ಅವರು ಸಮಿತಿ ಪದಾಧಿಕಾರಿಗಳ ಕೆಲಸ- ಕಾರ್ಯಗಳ ಕುರಿತು ಮಾಹಿತಿ ನೀಡಿದರು.
ಸ್ವಾಗತ ಸಮಿತಿಯ ಅಧ್ಯಕ್ಷ ಕಾಂತಾಡಿಗುತ್ತು ಸೀತಾರಾಮ ಶೆಟ್ಟಿ, ಉಪಾಧ್ಯಕ್ಷ ರಿಯಾಝ್ ಹುಸೇನ್, ಸ್ವಾಗತ ಸಮಿತಿ ಸಂಚಾಲಕ ಎಂ. ಪರಮೇಶ್ವರ ಮೂಲ್ಯ, ಊಟೋಪಚಾರ
ಸಮಿತಿ ಸಂಚಾಲಕ ಸದಾನಂದ ಶೆಟ್ಟಿ, ಆರ್ಥಿಕ ಸಮಿತಿ ಸಂಚಾಲಕ ಪ್ರಕಾಶ್ ಶೆಟ್ಟಿ ಶ್ರೀ ಶೈಲ,  ವೇದಿಕೆ ಸಮಿತಿ ಸಂಚಾಲಕ ಸುರೇಶ್ ಪೂಜಾರಿ, ಅತಿಥಿ ಸತ್ಕಾರ ಸಮಿತಿ ಸಂಚಾಲಕ ಪ್ರಭಾಕರ್ ಪ್ರಭು, ಕಲೋತ್ಸವ ಸಮಿತಿ ಗೌರವಾಧ್ಯಕ್ಷ ಜಯರಾಮ ರೈ, ಸಂಯೋಜನಾ ಸಮಿತಿಯ ಸದಸ್ಯರಾದ ಶಿವ  ಪ್ರಸಾದ್ ಕೊಟ್ಟಾರಿ, ಪರಮೇಶ್ವರ ಮೂಲ್ಯ, ಜಯಾನಂದ ಪೆರಾಜೆ, ಫಾರೂಕ್ ಬಂಟ್ವಾಳ, ಮಧುಸೂದನ್ ಶೆಣೈ, ಪುರುಷೋತ್ತಮ್ ಸಾಲ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಅನಿತಾ ಎನ್. ಭಂಡಾರಿ, ಜಯಂತ್ ಕಾಮಾಜೆ, ಹಮೀದ್ ಮುನ್ನೂರು ಸಭೆಯಲ್ಲಿ ಭಾಗವಹಿಸಿದರು.
ಕಲೋತ್ಸವ ಪ್ರಯುಕ್ತ ಗಾಣದಪಡ್ಪು ಮೈದಾನದಲ್ಲಿ ಬೃಹತ್ ಜೇಂಟ್ ವೀಲ್, ಬ್ರೇಕ್ ಡ್ಯಾನ್ಸ್, ಡ್ರಾಗನ್ ಟ್ರೈನ್, ಕೋಲಂಬಸ್, ಪುಠಾಣಿ ರೈಲು ಮೊದಲಾದ ಆಟೋಟ ಪರಿಕರಗಳು ಸಂಯೋಜಿಸಲ್ಪಟ್ಟಿದೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...