Wednesday, June 25, 2025

ಕರಾವಳಿ ಕಲೋತ್ಸವಕ್ಕೆ ಬಿ.ಸಿ.ರೋಡಿನಲ್ಲಿ ಸಕಲ ಸಿದ್ಧತೆ

ಬಂಟ್ವಾಳ: ಬಂಟ್ವಾಳ, ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ವತಿಯಿಂದ ಡಿ.21ರಿಂದ 31ರ ವರೆಗೆ ನಡೆಯುವ ಕರಾವಳಿ ಕಲೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
ಕರಾವಳಿ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಕರಾವಳಿ ಕಲೋತ್ಸವ ಮೈದಾನದಲ್ಲಿ ಸಿದ್ಧತಾ ಸಭೆ ಜರುಗಿತು.
ಕಾರ್ಯಕ್ರಮದ ತಯಾರಿ ಬಗ್ಗೆ ಸ್ವಾಗತ ಸಮಿತಿ ಮತ್ತು ವಿವಿಧ ಸಮಿತಿಗಳ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಜವಾಬ್ದಾರಿಗಳನ್ನು ಹಂಚಲಾಯಿತು. ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ಮೋಹನದಾಸ್ ಕೊಟ್ಟಾರಿ ಅವರು ಸಮಿತಿ ಪದಾಧಿಕಾರಿಗಳ ಕೆಲಸ- ಕಾರ್ಯಗಳ ಕುರಿತು ಮಾಹಿತಿ ನೀಡಿದರು.
ಸ್ವಾಗತ ಸಮಿತಿಯ ಅಧ್ಯಕ್ಷ ಕಾಂತಾಡಿಗುತ್ತು ಸೀತಾರಾಮ ಶೆಟ್ಟಿ, ಉಪಾಧ್ಯಕ್ಷ ರಿಯಾಝ್ ಹುಸೇನ್, ಸ್ವಾಗತ ಸಮಿತಿ ಸಂಚಾಲಕ ಎಂ. ಪರಮೇಶ್ವರ ಮೂಲ್ಯ, ಊಟೋಪಚಾರ
ಸಮಿತಿ ಸಂಚಾಲಕ ಸದಾನಂದ ಶೆಟ್ಟಿ, ಆರ್ಥಿಕ ಸಮಿತಿ ಸಂಚಾಲಕ ಪ್ರಕಾಶ್ ಶೆಟ್ಟಿ ಶ್ರೀ ಶೈಲ,  ವೇದಿಕೆ ಸಮಿತಿ ಸಂಚಾಲಕ ಸುರೇಶ್ ಪೂಜಾರಿ, ಅತಿಥಿ ಸತ್ಕಾರ ಸಮಿತಿ ಸಂಚಾಲಕ ಪ್ರಭಾಕರ್ ಪ್ರಭು, ಕಲೋತ್ಸವ ಸಮಿತಿ ಗೌರವಾಧ್ಯಕ್ಷ ಜಯರಾಮ ರೈ, ಸಂಯೋಜನಾ ಸಮಿತಿಯ ಸದಸ್ಯರಾದ ಶಿವ  ಪ್ರಸಾದ್ ಕೊಟ್ಟಾರಿ, ಪರಮೇಶ್ವರ ಮೂಲ್ಯ, ಜಯಾನಂದ ಪೆರಾಜೆ, ಫಾರೂಕ್ ಬಂಟ್ವಾಳ, ಮಧುಸೂದನ್ ಶೆಣೈ, ಪುರುಷೋತ್ತಮ್ ಸಾಲ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಅನಿತಾ ಎನ್. ಭಂಡಾರಿ, ಜಯಂತ್ ಕಾಮಾಜೆ, ಹಮೀದ್ ಮುನ್ನೂರು ಸಭೆಯಲ್ಲಿ ಭಾಗವಹಿಸಿದರು.
ಕಲೋತ್ಸವ ಪ್ರಯುಕ್ತ ಗಾಣದಪಡ್ಪು ಮೈದಾನದಲ್ಲಿ ಬೃಹತ್ ಜೇಂಟ್ ವೀಲ್, ಬ್ರೇಕ್ ಡ್ಯಾನ್ಸ್, ಡ್ರಾಗನ್ ಟ್ರೈನ್, ಕೋಲಂಬಸ್, ಪುಠಾಣಿ ರೈಲು ಮೊದಲಾದ ಆಟೋಟ ಪರಿಕರಗಳು ಸಂಯೋಜಿಸಲ್ಪಟ್ಟಿದೆ.

More from the blog

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...

ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ- ರಾಜೇಶ್ ಬಿ

ಮಂಗಳೂರು : ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ...