Saturday, January 31, 2026

ರೈಲ್ವೆ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬ ಮುರಿದು ಘನ ವಾಹನಕ್ಕೆ ಡಿಕ್ಕಿ

ವಿಟ್ಲ: ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬ ಹೆದ್ದಾರಿ ಅಡ್ಡವಾಗಿ ಬಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಘನ ವಾಹನಗಳು ಸೇತುವೆಗೆ ಅಪ್ಪಳಿಸದಂತೆ ಮುಂಜಾಗರೂಕತೆಯಾಗಿ ಈ ಕಂಬವನ್ನು ಅಳವಡಿಸಲಾಗುತ್ತದೆ. ಈ ಸೇಫ್ ಗಾರ್ಡ್ ಗೆ ಘನ ವಾಹನವೊಂದು ಢಿಕ್ಕಿ ಹೊಡೆದಿದೆ. ಇದರಿಂದ ಕಂಬ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮಿತ್ತೂರು ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂದಿದೆ.

ಈ ಹಿಂದೆಯೂ ಹಲವು ಬಾರಿ ಈ ರೈಲ್ವೇ ಸೇಫ್ ಗಾರ್ಡ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು ಎನ್ನುವುದನ್ನು ಸ್ಥಳೀಯರು ಸ್ಮರಿಸಿಕೊಂಡಿದ್ದಾರೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...