Wednesday, February 12, 2025

ಒಂದೇ ಮಳೆಗೆ ಬಿಸಿರೋಡ್ ಜಲಾವೃತ

ಬಂಟ್ವಾಳ: ಮಳೆ ಬಂತೆಂದರೆ ಬಿ.ಸಿ.ರೋಡಿನ ಅವಸ್ಥೆ ಹೇಳಲಾರದಷ್ಟು ಕೊಳಕು. ಪ್ರಥಮ ಮಳೆಗೆ ಬಿ.ಸಿ.ರೋಡಿನ ಸರ್ವೀಸ್ ರಸ್ತೆ ತುಂಬಾ ನೀರು.
ಬಿ.ಸಿ.ರೋಡಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎದುರು ರಸ್ತೆಯಲ್ಲಿ ನೀರು ಹರಿದು ಹೋಗಲು ದಾರಿ ಇಲ್ಲದೆ ತುಂಬಿರುವ ನೀರು.
ಕಳೆದ ಮಳೆಗಾಲದಲ್ಲಿಯೂ ಈ ಪರಿಸರದಲ್ಲಿ ಇದೇ ಸಮಸ್ಯೆ ಉಂಟಾಗಿತ್ತು.
ಹಾಗಾಗಿ ಮಳೆಗಾಲ ಆರಂಭವಾಗುವ ಮುನ್ನವೇ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕಿತ್ತು.
ಬಿ.ಸಿ.ರೋಡಿನ ಸರ್ವೀಸ್ ರಸ್ತೆಯಲ್ಲಿಯೂ ಇದೇ ಸಮಸ್ಯೆ ಪ್ರಥಮ‌ ಮಳೆಗೆ ಅಂಗಡಿಯೊಳಗೆ ನೀರು ಹೋಗಿದೆ.


ಸರ್ವೀಸ್ ರಸ್ತೆಯ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ನಿರ್ಮಾಣ ಮಾಡದೆ ಇರುವುದೇ ಇದಕ್ಕೆ ಕಾರಣ.
ಇದರ ಬಗ್ಗೆ ಅನೇಕ ಬಾರಿ ಮಾದ್ಯಮ ಗಳು ಎಚ್ಚರಿಕೆ ಯ ವರದಿ ಮಾಡಿದ್ದರು ಕೂಡಾ ಸಂಬಂಧಿಸಿದ ಇಲಾಖೆ ಮಾತ್ರ ಎಚ್ಚೆತ್ತುಕೊಂಡಿಲ್ಲ.
ಮಳೆಗಾಲ ಆರಂಭವಾಗುವ ಮುನ್ನವೇ ಇದಕ್ಕೆ ಕಾಂಕ್ರೀಟ್ ಅಥವಾ ಚರಂಡಿಯ ಕೆಲಸ ಮಾಡಿದ್ದರೆ ಮತ್ತೆ ಅದೇ ಸಮಸ್ಯೆ ಉದ್ಬವವಾಗುತ್ತಿರಲಿಲ್ಲ.
ಸರ್ವೀಸ್ ಬಸ್ ನಿಲ್ದಾಣ ದಲ್ಲಿ ನೀರು ನಿಂತು ಕೃತಕ ನೆರೆಯಂತಾಗುತ್ತದೆ. ಬಸ್ ನಿಲ್ಲಿಸಲು ಅಥವಾ ಪ್ರಯಾಣಿಕರು ಬಸ್ ಗೆ ಹತ್ತಿ ಇಳಿಯಲು ಸಾಧ್ಯವಾಗದ ಪರಿಸ್ಥಿತಿ.
ಇತ್ತೀಚಿಗೆ ಸಭೆಯೊಂದಕ್ಕೆ ಆಗಮಿಸಿದ ಎ.ಸಿ.ಶಾಸಕರೊಂದಿಗೆ ಈ ಸಮಸ್ಯೆ ಯ ಪ್ರದೇಶಕ್ಕೆ ಭೇಟಿ ನೀಡಿ ಮಳೆ ಗಾಲ ಆರಂಭವಾಗುವ ಮುನ್ನವೇ ಇಲ್ಲಿ ನೀರು ನಿಲ್ಲದಂತೆ ಕಾಂಕ್ರೀಟ್ ಹಾಕಿ ಸಮಸ್ಯೆ ಪರಿಹಾರಕ್ಕೆ ಪುರಸಭಾ ಇಂಜಿನಿಯರ್ ಹಾಗೂ ಅಧಿಕಾರಿಗೆ ಸೂಚನೆ ನೀಡಿದ್ದರು.
ಆದರೆ ಮಳೆಗಾಲ ಆರಂಭವಾದರೂ ಇವರ ಕಾಮಗಾರಿಗೆ ವೇಗ ಸಿಕ್ಕಿಲ್ಲ. ಮತ್ತೆ ಅದೇ ರಾಗ ಅದೇ ಹಾಡು…ಬಿ.ಸಿ.ರೋಡಿನ ಸಮಸ್ಯೆಗೆ ಅಂತ್ಯವಿಲ್ಲ!

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...