Thursday, June 26, 2025

ಒಂದೇ ಮಳೆಗೆ ಬಿಸಿರೋಡ್ ಜಲಾವೃತ

ಬಂಟ್ವಾಳ: ಮಳೆ ಬಂತೆಂದರೆ ಬಿ.ಸಿ.ರೋಡಿನ ಅವಸ್ಥೆ ಹೇಳಲಾರದಷ್ಟು ಕೊಳಕು. ಪ್ರಥಮ ಮಳೆಗೆ ಬಿ.ಸಿ.ರೋಡಿನ ಸರ್ವೀಸ್ ರಸ್ತೆ ತುಂಬಾ ನೀರು.
ಬಿ.ಸಿ.ರೋಡಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎದುರು ರಸ್ತೆಯಲ್ಲಿ ನೀರು ಹರಿದು ಹೋಗಲು ದಾರಿ ಇಲ್ಲದೆ ತುಂಬಿರುವ ನೀರು.
ಕಳೆದ ಮಳೆಗಾಲದಲ್ಲಿಯೂ ಈ ಪರಿಸರದಲ್ಲಿ ಇದೇ ಸಮಸ್ಯೆ ಉಂಟಾಗಿತ್ತು.
ಹಾಗಾಗಿ ಮಳೆಗಾಲ ಆರಂಭವಾಗುವ ಮುನ್ನವೇ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕಿತ್ತು.
ಬಿ.ಸಿ.ರೋಡಿನ ಸರ್ವೀಸ್ ರಸ್ತೆಯಲ್ಲಿಯೂ ಇದೇ ಸಮಸ್ಯೆ ಪ್ರಥಮ‌ ಮಳೆಗೆ ಅಂಗಡಿಯೊಳಗೆ ನೀರು ಹೋಗಿದೆ.


ಸರ್ವೀಸ್ ರಸ್ತೆಯ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ನಿರ್ಮಾಣ ಮಾಡದೆ ಇರುವುದೇ ಇದಕ್ಕೆ ಕಾರಣ.
ಇದರ ಬಗ್ಗೆ ಅನೇಕ ಬಾರಿ ಮಾದ್ಯಮ ಗಳು ಎಚ್ಚರಿಕೆ ಯ ವರದಿ ಮಾಡಿದ್ದರು ಕೂಡಾ ಸಂಬಂಧಿಸಿದ ಇಲಾಖೆ ಮಾತ್ರ ಎಚ್ಚೆತ್ತುಕೊಂಡಿಲ್ಲ.
ಮಳೆಗಾಲ ಆರಂಭವಾಗುವ ಮುನ್ನವೇ ಇದಕ್ಕೆ ಕಾಂಕ್ರೀಟ್ ಅಥವಾ ಚರಂಡಿಯ ಕೆಲಸ ಮಾಡಿದ್ದರೆ ಮತ್ತೆ ಅದೇ ಸಮಸ್ಯೆ ಉದ್ಬವವಾಗುತ್ತಿರಲಿಲ್ಲ.
ಸರ್ವೀಸ್ ಬಸ್ ನಿಲ್ದಾಣ ದಲ್ಲಿ ನೀರು ನಿಂತು ಕೃತಕ ನೆರೆಯಂತಾಗುತ್ತದೆ. ಬಸ್ ನಿಲ್ಲಿಸಲು ಅಥವಾ ಪ್ರಯಾಣಿಕರು ಬಸ್ ಗೆ ಹತ್ತಿ ಇಳಿಯಲು ಸಾಧ್ಯವಾಗದ ಪರಿಸ್ಥಿತಿ.
ಇತ್ತೀಚಿಗೆ ಸಭೆಯೊಂದಕ್ಕೆ ಆಗಮಿಸಿದ ಎ.ಸಿ.ಶಾಸಕರೊಂದಿಗೆ ಈ ಸಮಸ್ಯೆ ಯ ಪ್ರದೇಶಕ್ಕೆ ಭೇಟಿ ನೀಡಿ ಮಳೆ ಗಾಲ ಆರಂಭವಾಗುವ ಮುನ್ನವೇ ಇಲ್ಲಿ ನೀರು ನಿಲ್ಲದಂತೆ ಕಾಂಕ್ರೀಟ್ ಹಾಕಿ ಸಮಸ್ಯೆ ಪರಿಹಾರಕ್ಕೆ ಪುರಸಭಾ ಇಂಜಿನಿಯರ್ ಹಾಗೂ ಅಧಿಕಾರಿಗೆ ಸೂಚನೆ ನೀಡಿದ್ದರು.
ಆದರೆ ಮಳೆಗಾಲ ಆರಂಭವಾದರೂ ಇವರ ಕಾಮಗಾರಿಗೆ ವೇಗ ಸಿಕ್ಕಿಲ್ಲ. ಮತ್ತೆ ಅದೇ ರಾಗ ಅದೇ ಹಾಡು…ಬಿ.ಸಿ.ರೋಡಿನ ಸಮಸ್ಯೆಗೆ ಅಂತ್ಯವಿಲ್ಲ!

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...