Sunday, June 29, 2025

ಬಿಸಿರೋಡು ನಗರದ ನಡುವೆಯೇ ಇದೆ ಸೊಳ್ಳೆ ಉತ್ಪಾದನಾ ಕೇಂದ್ರ

ಬಂಟ್ವಾಳ : ಬಿ.ಸಿ.ರೋಡು ನಗರದ ನಡುವೆಯೇ ಇದೆ ಸೊಳ್ಳೆ ಉತ್ಪಾದನಾ ಕೇಂದ್ರ. ಅದೂ ಬಂಟ್ವಾಳ ಪುರಸಭೆಯ ಆಶ್ರಯದಲ್ಲಿ..!
ಬಂಟ್ವಾಳ ಪುರಸಭೆಯ ಅಧೀನದಲ್ಲಿರುವ ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣ ಕಾರ್ಯಾಚರಿಸುತ್ತಿರುವ ವಾಣಿಜ್ಯ ಸಂಕೀರ್ಣದ ಮೇಲ್ಭಾಗದ ಸ್ಥಿತಿ. ಈ ಕಟ್ಟಡದ ಮೇಲ್ಚಾವಣಿಯಲ್ಲಿರುವ ನೀರಿನ ಟ್ಯಾಂಕ್ ಸೋರುತ್ತಿದ್ದು,  ಕಟ್ಟಡದ ಮೇಲಿನ ಥಾರಸಿಯಲ್ಲಿ ಶೇಖರಣೆಯಾಗಿ ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಪರಿವರ್ತನೆಗೊಂಡಿದೆ.

ಇದೇ ಕಟ್ಟಡದಲ್ಲಿ ಮತ್ತು ಕಟ್ಟಡದ ಆಸುಪಾಸಿನಲ್ಲಿ ಅನೇಕ ಆಹಾರ ಉತ್ಪನ್ನಗಳ ಮಾರಾಟ ಕೇಂದ್ರಗಳಿದ್ದು, ಇದರ ಮೇಲೆ‌ ಪರಿಣಾಮ ಬೀರುವ ಸಾಧ್ಯತೆ ಇದೆ. ಮಾತ್ರವಲ್ಲದೆ ನಿತ್ಯ ಜನನಿಬಿಡ ಪ್ರದೇಶವಾಗಿರುವ ಈ ಸ್ಥಳದಲ್ಲಿ ಅನೇಕ ಕಛೇರಿಗಳೂ ಇದ್ದು, ತಕ್ಷಣ ಕ್ರಮ ಕೈಗೊಳ್ಳದೇ ಇದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ.
ಕೊರೊನಾ, ಹಕ್ಕಿ ಜ್ವರದ ಭೀತಿಯಲ್ಲಿ ಜನ ತತ್ತರಿಸುತ್ತಿರುವ ನಡುವೆ ಇಂತಹಾ ಸೊಳ್ಳೆ ಉತ್ಪಾದನಾ ಕೇಂದ್ರಗಳು ಮತ್ತಷ್ಟು ಆತಂಕಕ್ಕೆ ಕಾರಣವಾಗುತ್ತದೆ. ತಾಲೂಕಿನಲ್ಲಿ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಕಾರ್ಯಪ್ರವೃತ್ತರಾಗಿದ್ದಾರೆ. ಈಗಾಗಲೇ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂಬ ನಿರ್ದೇಶನವನ್ನೂ ನೀಡಿದ್ದಾರೆ. ಆದರೆ
ಪರಿಸರ ಸ್ವಚ್ಛತೆಯ ಪಾಠ ಹೇಳಬೇಕಾದ ಪುರಸಭೆಯೇ ಈ ರೀತಿಯ ನಿರ್ಲಕ್ಷ್ಯ ವಹಿಸುವುದು ಸರಿಯೇ ಎಂಬುದು ಕಟ್ಟಡದ ಆಸುಪಾಸಿನ ನಿವಾಸಿಗಳ ಪ್ರಶ್ನೆ.

More from the blog

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...