Friday, July 11, 2025

ಬೆದ್ರಮಾರ್ : ಹಡೀಲು ಭೂಮಿಯಲ್ಲಿ ಕೃಷಿ ಕಾರ್ಯ, ಕೆಸರ್‌ಡೊಂಜಿ ದಿನ

ದೇಸೀ ಕ್ರೀಡೆ, ಸಂಸ್ಕೃತಿಯನ್ನು ಉಳಿಸುವ ಕಾರ್ಯ ಶ್ಲಾಘನೀಯ: ತುಂಗಪ್ಪ ಬಂಗೇರ

ಬಂಟ್ವಾಳ: ಕೆಸರುಗದ್ದೆ ಕ್ರೀಡೆ ಮನರಂಜನೆ ಜತೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು, ಇದನ್ನು ಮುಂದಿನ ಪೀಳಿಗೆಗೆ ತಿಳಿಸಲು ಇಂತಹ ಕ್ರೀಡಾಕೂಟ ಆಯೋಜನೆ ಶ್ಲಾಘನೀಯ ಎಂದು ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಹೇಳಿದರು.

ಅವರು ರವಿವಾರ ಬಂಟ್ವಾಳ ತಾ. ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ, ಹಿಂದು ಜಾಗರಣ ವೇದಿಕೆ ಛತ್ರಪತಿ ಶಿವಾಜಿ ಘಟಕ ಮೂಡುಪಡುಕೋಡಿ, ಶ್ರೀ ಲಕ್ಷ್ಮೀ ಮಹಿಳಾ ಮಂಡಳಿ ಪಾಂಗಲ್ಪಾಡಿ ಇದರ ಜಂಟಿ ಆಶ್ರಯದಲ್ಲಿ ಹಡಿಲು ಬಿದ್ದ ಭೂಮಿಯಲ್ಲಿ ಕೃಷಿ ಕ್ರಾಂತಿ ಕಾರ್ಯಕ್ರಮ ಪ್ರಯುಕ್ತ ಕಲಾಬಾಗಿಲುವಿನ ಬೆದ್ರಮಾರ್ ಗದ್ದೆಯಲ್ಲಿ ನಡೆದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಡಿಲು ಬಿದ್ದ ಗದ್ದೆಗಳಲ್ಲಿ ಕೃಷಿ ಕಾರ್ಯ ನಡೆಸಲು ಯುವಕರು ಮುಂದಾಗಿರುವುದು ಅಭಿನಂದನೀಯ ಇಂತಹ ಕಾರ್ಯಕ್ರಮಕ್ಕೆ ದಾನಿಗಳ ಸಹಕಾರ ಅಗತ್ಯ ಎಂದರು.

ಪ್ರಗತಿಪರ ಕೃಷಿಕ ಸಂಜೀವ ಶೆಟ್ಟಿ ಗುಂಡ್ಯಾರು ಅಧ್ಯಕ್ಷತೆ ವಹಿಸಿದ್ದರು. ಸ್ಥಳದಾನಿ ಅಟೋಮೇಶನ್ ಕ್ಲೌಡ್ ಸೊಲ್ಯೂಷನ್ ಎಂ.ಡಿ.ಜಗದೀಶ್ ರಾಮ, ಪತ್ರಕರ್ತ ರತ್ನದೇವ್ ಪುಂಜಾಲಕಟ್ಟೆ, ಉದ್ಯಮಿ ಹರೀಂದ್ರ ಪೈ, ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷ ಎಂ.ಪಿ.ಶೇಖರ್ ಶುಭ ಹಾರೈಸಿದರು. ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್., ಉದ್ಯಮಿಗಳಾದ ಅಬ್ದುಲ್ ನಜೀರ್ ಸಾಹೇಬ್, ಮೋಹನ್ ಶೆಟ್ಟಿ ನರ್ವಲ್ದಡ್ಡ,ಬೋಬಿ ರಾಯಿ, ಅರವಿಂದ ಪೈ, ಶೇಖರ್ ಅಬ್ರೋಡಿ, ಪ್ರಗತಿಪರ ಕೃಷಿಕರಾದ ಬೂಬ ಸಫಲ್ಯ ಮುಂಡಬಲ್, ನಿರಂಜನ್ ಜೈನ್ ಎಡ್ತೂರುಗುತ್ತು, ರಮೇಶ್ ನಾಕ್ ಕಲ್ಲಡ್ಕ,ಇರ್ವತ್ತೂರು ಗ್ರಾ.ಪಂ.ಪಿಡಿಒ ಜೋಯೆಲ್ ಪ್ರಶಾಂತ್ ಫೆಲೆರೊ, ಗಂಗಾಧರ ಶೆಟ್ಟಿ, ಪಂಜಿಕಲ್ಲು ಗ್ರಾ.ಪಂ.ಸದಸ್ಯ ಮೋಹನ್‌ದಾಸ್, ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸುನಿಲ್ ಸಿಕ್ವೆರಾ,ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಮಹಿಳಾ ಮಂಡಳಿ ಅಧ್ಯಕ್ಷೆ ಶಶಿಕಲಾ ಉಡುಪ,ಹಿಂದು ಜಾಗರಣ ವೇದಿಕೆ ಛತ್ರಪತಿ ಶಿವಾಜಿ ಘಟಕ ಮೂಡುಪಡುಕೋಡಿ ಅಧ್ಯಕ್ಷ ಯಕ್ಷಿತ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಗದೀಶ ರಾಮ ಅವರನ್ನು ಸಮ್ಮಾನಿಸಲಾಯಿತು.ಕಂಬಳದ ಓಟದ ಕೋಣಗಳನ್ನು ಗದ್ದೆಗಿಳಿಸಲಾಯಿತು.

ಶಾರದೋತ್ಸವ ಸಮಿತಿ ಉಪಾಧ್ಯಕ್ಷ ಶಂಕರ ಶೆಟ್ಟಿ ಬೆದ್ರಮಾರ್ ಸ್ವಾಗತಿಸಿ, ಪ್ರಸ್ತಾವಿಸಿದರು. ಪ್ರ.ಕಾರ್ಯದರ್ಶಿ ದಯಾನಂದ ಎರ್ಮೆನಾಡು ವಂದಿಸಿದರು. ಗಣೇಶ್ ಶೆಟ್ಟಿ ಸೆವಾ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

More from the blog

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...