Wednesday, February 12, 2025

ವಿಟ್ಲ ಗ್ರಾಮೀಣ ಬ್ಯಾಂಕ್ ನಿವೃತ್ತ ಸಿಬ್ಬಂದಿ ಬೀಳ್ಕೊಡುಗೆ

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನಲ್ಲಿ 39 ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಾಜೇಶ್ವರಿ ಅವರ ಬೀಳ್ಕೊಡುಗೆ, ಗೌರವ ಸಮಾರಂಭ ಶುಕ್ರವಾರ ಬ್ಯಾಂಕಿನ ವಠಾರದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಎಲ್.ಎನ್.ಕೂಡೂರು ಮಾತನಾಡಿ ಸಿಬ್ಬಂದಿಗಳ ವಿನಯ, ವಿಧೇಯತೆಯ ಗ್ರಾಹಕ ಸೇವೆಯಿಂದ ಸಹಕಾರಿ ಬ್ಯಾಂಕ್‌ಗಳ ಆರ್ಥಿಕ ವ್ಯವಹಾರ ಪ್ರಗತಿ ಸಾಧಿಸುತ್ತಲೇ ಸಾಗುತ್ತದೆ. ರಾಜೇಶ್ವರಿ ಅವರ ಕರ್ತವ್ಯನಿಷ್ಠೆ ಪ್ರಾಮಾಣಿಕತೆ ಸದಾ ನೆನಪಿನಲ್ಲಿ ಉಳಿಯುವಂತಾಗಿದೆ ಎಂದು ತಿಳಿಸಿದರು.
ನಿವೃತ್ತರ ಪರವಾಗಿ ಬ್ಯಾಂಕಿನ ನಿರ್ದೇಶಕ ಎ.ಅನಂತಭಟ್, ಮುಖ್ಯ ಕಾರ್‍ಯ ನಿರ್ವಾಹಕ ಮೋನಪ್ಪ ಗೌಡ ಸೇರಾಜೆ, ಶ್ರೀಕಾಂತ್, ಸೇಲ್ಸ್ ಅಧಿಕಾರಿ ಸವಿತ ನಾಗರಾಜ್, ಇಂಜಿನಿಯರ್ ರಾಘವೇಂದ್ರ ಪೈ, ಸುರೇಶ್ ಬನಾರಿ, ನಿವೃತ್ತ ಮುಖ್ಯ ಕಾರ್‍ಯ ನಿರ್ವಹಣಾಧಿಕಾರಿ ವಿ.ಎಸ್.ಕೆದಿಲಾಯ, ಶಿವಣ್ಣ ಮಾತನಾಡಿದರು. ನಿವೃತ್ತರ ಪತಿ, ಜೆಸಿಐ ರಾಷ್ಟ್ರೀಯ ತರಬೇತುದಾರ ಶ್ರೀಧರ ಕೊಡಕ್ಕಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಉಪಾಧ್ಯಕ್ಷ ಜಗನ್ನಾಥ ಹೆಚ್. ಸಾಲ್ಯಾನ್, ನಿರ್ದೇಶಕರಾದ ಹರೀಶ್ ನಾಯಕ್ ವಿಟ್ಲ, ದಿನೇಶ್ ವಿಟ್ಲ, ಮನೋರಂಜನ್ ಕೆ.ಆರ್. ಕರೈ, ಉದಯ ಕುಮಾರ್ ಆಲಂಗಾರು, ಗೀತಾ ವಿಟ್ಲ, ಪ್ರೀತಾ ಭಟ್ ಕೆ.
ನಿರ್ದೇಶಕ ಪ್ರಕಾಶ್ ಕೆ.ಎಸ್. ಸ್ವಾಗತಿಸಿದರು. ವಿಶ್ವನಾಥ ಎಂ. ವೀರಕಂಭ ವಂದಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...