Friday, January 30, 2026

ಅಗತ್ಯವಸ್ತುಗಳ ಬೆಲೆಏರಿಕೆ ಮಾಡಿದ್ದಾರೆ ಅಂಗಡಿ ಮಾಲೀಕರು: ಗ್ರಾಹಕರ ಆರೋಪ

ಬಂಟ್ವಾಳ: ಕೊರೊನಾ ವೈರಸ್ ನಿಯಂತ್ರಣ ದ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿದೆ.
ಹಾಗಾಗಿ ಜನರು ಅಗತ್ಯವಸ್ತುಗಳ ಖರೀದಿ ಗೆ ಒಂದಷ್ಟು ತೊಂದರೆ ಗಳು ಅಗುತ್ತಿದೆ.
ಹಾಗಾಗಿ ಜಿಲ್ಲೆಯ ಲ್ಲಿ ಜನರು ಅಗತ್ಯ ವಸ್ತುಗಳನ್ನು ಪಡೆಯುವ ಸಲುವಾಗಿ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಗಳ ವರಗೆ ಸಡಿಲಿಕೆ ಮಾಡಲಾಗಿದೆ.
ಲಾಕ್ ಡೌನ ಅಗಿರುವ ಈ ಸಂದರ್ಭದಲ್ಲಿ ಅಗತ್ಯವಸ್ತುಗಳ ಮಾರಾಟ ಮಾಡುವ ಅಂಗಡಿ ಮಾಲೀಕರು ಯಾರು ಕೂಡ ದರದಲ್ಲಿ ಏರಿಕೆಮಾಡಬಾರದು ಒಂದು ವೇಳೆ ಮಾಡಿದರೆ ಅಂತವರ ಮೇಲೆ ಜಿಲ್ಲಾಡಳಿತ ಕಾನೂನು ಕ್ರಮಕೈಗೊಳ್ಳಲು ಸಿದ್ದವಿದೆ ಎಂಬ ಮಾತನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ನಡುವೆ ಬಂಟ್ವಾಳ ತಾಲೂಕಿನ ಕೆಲ ಅಂಗಡಿ ಮಾಲಕರು ಹಾಗೂ ತರಕಾರಿ ವ್ಯಾಪಾರಿಗಳು ಅಗತ್ಯವಸ್ತುಗಳಿಗೆ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಗಳು ಕೇಳಿಬಂದಿವೆ.
ಒಂದು ವೇಳೆ ಈ ಬಗ್ಗೆ ಪ್ರಶ್ನೆ ಮಾಡಿದ ಗಿರಾಕಿಗಳಿಗೆ ಸಾಮಾಗ್ರಿಗಳನ್ನು ನೀಡದೆ ವಾಪಾಸು ಕಳುಹಿಸಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ.
ಕೋವಿಡ್ 19 ನ ಈ ಸಂದರ್ಭದಲ್ಲಿ ಜನಸಾಮಾನ್ಯರು ಸಾಕಷ್ಟು ಕಷ್ಟದಲ್ಲಿದ್ದಾರೆ.
ಹಾಗಾಗಿ ಜನಸಾಮಾನ್ಯರ ನಾಡಿಮಿಡಿತವನ್ನು ಅಂದಾಜಿಸುವ ಕೆಲಸ ಅಂಗಡಿ ಮಾಲಕರಿರಬೇಕು.
ಪಾಣೆಮಂಗಳೂರು ಆಲಡ್ಕ ಕೋಳಿ ಪಾರಂ ಒಂದರಲ್ಲಿ ಕೋಳಿ ಅಂಗಡಿ ಮಾಲಕ ಮಂಗಳವಾರ ದುಪ್ಪಟ್ಟು ಹಣ ಪಡೆದುಕೊಂಡಿದ್ದಾನೆ ಎಂಬ ಆರೋಪಗಳು ಕೂಡ ಕೇಳಿಬಂದಿವೆ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಸಂದೇಶ ಗಳು ರವಾನೆಯಾಗುತ್ತಿದ್ದವು.
ಇಂತಹ ಘಟನೆಗಳು ಬಹುತೇಕ ಕಡೆಗಳಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದು ಅಧಿಕಾರಿ ವರ್ಗ ಇಂತವರಿಗೆ ಬ್ರೇಕ್ ಹಾಕಬೇಕಾಗಿದೆ.
ಲಾಕ್ ಡೌನ್ ಅಗಿ ಅಗತ್ಯ ಸಾಮಾಗ್ರಿಗಳ ಕೊರತೆ ಅನುಭವಿಸುತ್ತಿರುವ ಕಾಲಘಟ್ಟದಲ್ಲಿ ದುಪ್ಪಟ್ಟು ಹಣ ನೀಡಿಯಾದರೂ ಪಡೆಯುವವರೇ ಹೆಚ್ಚು.
ಆದರೆ
ಈ ಬಗ್ಗೆ ದೂರು ಕೊಡಲು ಗ್ರಾಹಕರು ಮಾತ್ರ ಮುಂದಾಗುತ್ತಿಲ್ಲ.
ದೂರು ನೀಡಿದರೆ ಮತ್ತೆ ಎಲ್ಲಿ ಸಮಸ್ಯೆ ಅಗುತ್ತದಾ ಎಂಬ ಭಯದಿಂದ .

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...