Wednesday, February 12, 2025

ಎರಡು ಕೈಗಳಿಲ್ಲದಿದ್ದರೂ ಕಾಲಿನಲ್ಲಿ ಮತ ಚಲಾಯಿಸಿ ಮಾದರಿಯಾದ ಬೆಳ್ತಂಗಡಿ ಮಹಿಳೆ

ಬೆಳ್ತಂಗಡಿ : ಮಹಿಳೆಯೊಬ್ಬರು ಕೈಗಳೇ ಇಲ್ಲದಿದ್ದರೂ ತನ್ನ ಹಕ್ಕನ್ನು ಚಲಾಯಿಸಿ ಇತರರಿಗೆ ಮಾದರಿಯಾದ ಪ್ರಸಂಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಮೂಲತಃ ಬೆಳ್ತಂಗಡಿಯವರಾದ ಸಬಿತಾ ಮೋನಿಶ್ ಅವರಿಗೆ ಎರಡು ಕೈಗಳಿಲ್ಲ. ತಮಗೆ ಕೈಗಳೇ ಇಲ್ಲದಿದ್ದರೂ ಕೂಡ ಮತಗಟ್ಟೆಗೆ ಧಾವಿಸಿ ಕಾಲಿನಿಂದಲೇ ವೋಟ್ ಹಾಕಿ ಮಾದರಿಯಾಗಿದ್ದಾರೆ. ಸಬಿತಾ ಬೆಳ್ತಂಗಡಿಯ ಗರ್ಡಾಡಿಯ ಬೂತ್ ನಲ್ಲಿ ಮತ ಚಲಾಯಿಸಿದ್ದು, ಅಧಿಕಾರಿಗಳು ಕಾಲಿನ ಬೆರಳಿಗೇ ಇಂಕ್ ಹಾಕಿದ್ದಾರೆ. ಸಬಿತಾ ಮೋನಿಶ್ ವಿಶೇಷ ಚೇತನರಾಗಿದ್ದರೂ ಕಾಲಿನಿಂದಲೇ ಪರೀಕ್ಷೆ ಬರೆದು ಎರಡು ಉನ್ನತ ಪದವಿ ಪಡೆದಿದ್ದಾರೆ ಎಂಬುದು ಗಮನಾರ್ಹ.

ಚುನಾವಣೆಗೆ ಮತದಾನ ಮಾಡುವಂತೆ ಚುನಾವಣಾ ಅಯೋಗ ಸೇರಿದಂತೆ ಜಿಲ್ಲಾಡಳಿತ ಮತದಾನ ಜಾಗೃತಿ ಅಭಿಯಾನ ನಡೆಸಿವೆ. ಆದರೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರೂ ಕುಂಟು ನೆಪ ಹೇಳಿ ಮತದಾನದಿಂದ ತಪ್ಪಿಸಿಕೊಳ್ಳುವವರು ಹಲವಾರು ಮಂದಿ ನಮ್ಮ ನಡುವೆ ಇದ್ದಾರೆ. ಅಷ್ಟೇ ಏಕೆ?, ತಮ್ಮ ಹಕ್ಕನ್ನು ಚಲಾಯಿಸಲು ರಜೆ ನೀಡಿದರೆ ಆ ರಜೆಯಲ್ಲಿ ಟೂರ್ ತೆರಳುವ ಜನರು ಇದ್ದಾರೆ. ಆದರೆ ಬೆಳ್ತಂಗಡಿಯ ಮಹಿಳೆಯೊಬ್ಬರು ವಿಕಲ ಚೇತನರಾಗಿದ್ದರೂ ಕೂಡ ಮತ ಚಲಾಯಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...