Tuesday, January 27, 2026

ಉಪನ್ಯಾಸ ಕ ಹತ್ಯೆಗೆ ಸಂಬಂಧಿಸಿದಂತೆ ಮೂವರು ವಶಕ್ಕೆ

ಬಂಟ್ವಾಳ: ಬೆಳ್ತಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯ ಮುಂಡೂರು ಎಂಬಲ್ಲಿ ಸೋಮವಾರ ತಡರಾತ್ರಿ ನಡೆದ ಘಟನೆ ಐಟಿಐ ಉಪನ್ಯಾಸ ಕ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದ ಪೋಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮಾಲಾಡಿ ಸರಕಾರಿ ಐಟಿಐ ಉಪನ್ಯಾಸಕ ವಿಕ್ರಂ ಎಂಬವರನ್ನು ತಡರಾತ್ರಿ ಯಾರೋ ಅಪರಿಚಿತರು ಮಚ್ಚಿನಿಂದ ಕಡಿದು ಕೊಲೆ ಮಾಡಿ ಪರಾಯಾಗಿದ್ದರು.

ಈ ಕೊಲೆಯ ಪತ್ತೆ ಗಾಗಿ ಎಸ್.ಪಿ. ಲಕ್ಮೀಪ್ರಸಾದ್ ಅವರು ವಿಶೇಷ ತಂಡ ರಚನೆ ಮಾಡಿದ್ದರು.
ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್ ತಂಡ ಮತ್ತು ಬೆಳ್ತಂಗಡಿ ಇನ್ಸ್ ಪೆಕ್ಟರ್ ಸಂದೇಶ್ ಅವರ ಎರಡು ತಂಡಗಳು ಕಾರ್ಯಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತಡರಾತ್ರಿ 11ಗಂಟೆಗೆ ಅಪರಿಚಿತ ದ್ವಿಚಕ್ರ ವಾಹನ ನಿಂತದ್ದನ್ನು ಸ್ಥಳಿಯರು ನೋಡಿದ್ದು ಬಳಿಕ ಯಾವುದೋ ಕಾರಣಕ್ಕೆ ಕೊಲೆಮಾಡಿರಬಹುದು ಎಂದು ಶಂಕಿಶಲಾಗಿದೆ.

ವಿಕ್ರಮ್ ರವರ ಕಾರಿನ ಬಳಿ ಮದ್ಯದ ಬಾಟಲಿ ಇದ್ದು ಕುಡಿದ ಮತ್ತಿನಲ್ಲಿ ಜಗಳವಾಡಿ ಕೊಲೆ ಮಾಡಿರಬಹುದೇ ಅಥವಾ ಜಮೀನಿನ ವಿವಾದವೋ ಅಥವಾ ಇನ್ನಾವುದೋ ಕಾರಣಕ್ಕೆ ಕೊಲೆ ಮಾಡಿರಬಹುದೋ ಎಂಬುದು ಪೋಲೀಸ್ ತನಿಖೆಯ ಬಳಿಕ ತಿಳಿಯಬೇಕಾಗಿದೆ.

More from the blog

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...