Wednesday, February 12, 2025

ಆ್ಯಸಿಡ್‌ ದಾಳಿ ಪ್ರಕರಣ: 29 ವರ್ಷ ಬಳಿಕ ಆರೋಪಿ ಖುಲಾಸೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 1995ರಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.

27 ಸಪ್ಟಂಬರ್ 1995 ರಂದು ಉಜಿರೆ ಗ್ರಾಮದ ನಿವಾಸಿ ಮಂಜುನಾಥ್ ಪ್ರಭು ಅವರ ಮಗ ಗಣೇಶ್ ಪ್ರಭು ಎಂಬುವವರ ಮಾಲಿಕತ್ವಕ್ಕೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ಪ್ರಕರಣ ಆರೋಪಿ ಶಂಕರ ಗೌಡ ಯಾನೇ ವೀರಪ್ಪ ಗೌಡ ಬಾಡಿಗೆ ನೆಲೆಯಲ್ಲಿ ವಾಸ್ತವ್ಯ ಹೊಂದಿದ್ದು, ಆರೋಪಿತನ ಪತ್ನಿ ಗಣೇಶ್ ಪ್ರಭುವಿನ ಮನೆಯಲ್ಲಿ ಮನೆಗೆಲಸ ಮಾಡುತ್ತ ಜೀವನ ನಡೆಸುತ್ತಿದ್ದರು. ನಂತರ ಆಕೆಯನ್ನು ಮನೆಕೆಲಸದಿಂದ ತೆಗೆದುಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಕೆಲಸದಿಂದ ಕಿತ್ತುಹಾಕಿದ ಪೂರ್ವದ್ವೇಷದ ಕಾರಣಕ್ಕಾಗಿ ಆರೋಪಿಯು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಇನ್ನು ಈ ಸಂಬಂಧ ಶಂಕರ ಗೌಡ ಯಾನೇ ಶ್ರೀಧರ ಗೌಡ ಎಂಬವರನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಪ್ರಕರಣ ಕುರಿತು ದೀರ್ಘಕಾಲದ ಸಾಕ್ಷ್ಯ ವಿಚಾರಣೆಯು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದಿದ್ದು, ಇದೀಗ ಆರೋಪಿ ಶಂಕರಗೌಡ ಯಾನೆ ಶ್ರೀಧರ ಗೌಡ ದೋಷಮುಕ್ತನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...