ಕಳೆಂಜ: ಡೆತ್ ನೋಟ್ ಬರೆದು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆಂಜ ಗ್ರಾಮದ ಕಾಯರ್ತಡ್ಕ ಬಂದಿದೆ.

ಕಳೆಂಜ ಗ್ರಾಮದ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ವನಿತಾ ಯಾನೆ ರೇವತಿ ಮೃತ ಯುವತಿ.
ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಆದ್ರೆ ಯುವತಿ ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ ಠಾಣೆಯ ಪೊಲೀಸರು ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.

