Wednesday, June 25, 2025

ಮೋದಿಯನ್ನು ವಿಶೇಷ ರೀತಿಯಲ್ಲಿ ಸ್ವಾಗತಿಸಲು ಚೌಕೀದಾರ್ ಸಮವಸ್ತ್ರ ಧರಿಸಿದ ಬೆಳ್ತಂಗಡಿ ಶಾಸಕ ಬಿಜೆಪಿ ಹರೀಶ್ ಪೂಂಜಾ

ಮಂಗಳೂರು: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಇನ್ನೇನು ಕೆಲವೇ ಗಂಟೆಗಳಲ್ಲಿ ಆಗಮಿಸಲಿದ್ದಾರೆ. ಈ ನಡುವೆ ಮೋದಿ ಆಗಮನದ ಹಿನ್ನೆಲೆಯಲ್ಲಿ, ಬೆಳ್ತಂಗಡಿ ಬಿಜೆಪಿ ಘಟಕ ಮೈ ಭೀ ಚೌಕೀದಾರ್ ಅಭಿಯಾನ ನಡೆಸಲು ನಿರ್ಧರಿಸಿದ್ದು, ಪ್ರಧಾನಿ ಮೋದಿಯೆದುರು ಈ ಅಭಿಯಾನವನ್ನು ವಿಶೇಷ ರೀತಿಯಲ್ಲಿ ಅನಾವರಣಗೊಳಿಸಲು ಮಂಗಳೂರು ಬಿಜೆಪಿ ಘಟಕ ಸಿದ್ಧತೆ ನಡೆಸಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರೂ ಸೇರಿದಂತೆ ಸಾವಿರಕ್ಕೂ ಬಿಜೆಪಿ ಕಾರ್ಯಕರ್ತರು ಇಂದು ಮೈ ಭೀ ಚೌಕೀದಾರ್ ಎನ್ನುವ ಹೆಸರು ಪಟ್ಟಿಯೊಂದಿಗೆ ಕಾವಲುಗಾರನ ಸಮವಸ್ತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಚೌಕೀದಾರ್ ಸಮವಸ್ತ್ರದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಫೋಟೋ ವೈರಲ್ ಆಗಿದೆ.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...