Tuesday, July 8, 2025

ಕಡಬ: ದ.ಕ ಜಿಲ್ಲೆಯ ರೆಂಜಿಲಾಡಿ, ಬೆಳ್ತಂಗಡಿಯ ಶಿರ್ಲಾಲು ಪರಿಸರದಲ್ಲಿ ಕಾಣಿಸಿಕೊಂಡ ಮಿಡತೆ ಹಿಂಡು: ಕೃಷಿಕರಲ್ಲಿ ಆತಂಕ

ಬೆಳ್ತಂಗಡಿ : ದೇಶದ ಉತ್ತರ ಭಾರತದಲ್ಲಿ ರೈತರನ್ನು ಕಂಗೆಡಿಸಿದ ಮಿಡತೆಗಳ ಹಾವಳಿ ಇದೀಗ ಕರಾವಳಿಗೂ ಕಾಲಿಟ್ಟಿದ್ದು, ದ.ಕ ಜಿಲ್ಲೆಯ ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ರೆಂಜಿಲಾಡಿ ಗ್ರಾಮ ಹಾಗೂ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಪರಿಸರದಲ್ಲಿ ಸಂಜೆ ವೇಳೆ ಮಿಡತೆಯ ಹಿಂಡು ದಿಢೀರನೆ ಕಂಡುಬಂದಿದೆ.

ಈ ಮಿಡತೆಯು ಪ್ರಸ್ತುತ ಪ್ರಚಲಿತದಲ್ಲಿರುವ ಲೋಕಸ್ಟ್‌‌‌‌‌‌ ಆಗಿರುವುದಿಲ್ಲ. ಆದರೆ. ಪ್ರದೇಶದಲ್ಲಿ ಕಂಡುಬಂದಿರುವ ಮಿಡತೆಯು ಪ್ರೌಢಾವಸ್ಥೆ ಹಂತ ಮಾದರಿಯನ್ನು ಪರಿಶೀಲನೆಗಾಗಿ ಕೀಟತಜ್ಞರಿಗೆ ಕಳುಹಿಸಲಾಗಿದೆ ಹಾಗೂ ಕೀಟಶಾಸ್ತ್ರಜ್ಞರಿಂದ ಮಿಡತೆಯ ಗುರುತಿಸುವಿಕೆಯ ಹಂತದಲ್ಲಿದೆ. ಮಿಡತೆ ಹಾವಳಿಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ.

ಅದಾಗಿಯೂ ಕೂಡಾ ಈಗ ಕಂಡುಬಂದಿರುವ ಕೀಟವು ಬೆಳೆಗಳಿಗೆ ಹಾನಿಯನ್ನು ಉಂಟುಮಾಡಿದ ಪಕ್ಷದಲ್ಲಿ, ಕೀಟವು ಬೆಳೆಗಳಲ್ಲಿ ಕಂಡುಬಂದಲ್ಲಿ, ಡ್ರಮ್‌, ಪಾತ್ರೆ ಅಥವಾ ಫಲಕಗಳನ್ನು ಬಡಿಯುವುದರ ಮೂಲಕ ಹೆಚ್ಚಾಗಿ ಶಬ್ದವನ್ನು ಮಾಡಿ ಮಿಡತೆ ಸಮೂಹವನ್ನು ಇತರೆಡೆಗೆ ಓಡಿಸುವುದು, ಬೇವಿನ ಮೂಲದ ಕೀಟನಾಶಕಗಳನ್ನು ಸಿಂಪಡಿಸುವುದರಿಂದ ಕೀಟವು ಬೆಳೆ ಹಾನಿ ಮಾಡುವುದು ಕಡಿಮೆಯಾಗುತ್ತದೆ, ಕೀಟಬಾಧಿತ ಪ್ರದೇಶದಲ್ಲಿ ಹೊಗೆ ಮತ್ತು ಬೆಂಕಿಯನ್ನು ಹಾಕುವುದರಿಂದ ಕೊಲ್ಲುವುದು ಅಥವಾ ಬೇರೆಡೆಗೆ ಓಡಿಸಬಹುದಾಗಿದೆ, ಕೀಟವು ಮರಿಹುಳಗಳಾಗಿದ್ದಲ್ಲಿ ಭಾದಿತ ಪ್ರದೇಶ ಕನಿಷ್ಠ 2 ಅಡಿ ಆಳ ಹಾಗೂ 3 ಅಡಿ ಅಗಲದ ಗುಂಡಿಗಳನ್ನು ನಿರ್ಮಿಸಿ ಮರಿಹುಳಗಳನ್ನು ಸೆರೆಹಿಡಿದು ನಾಶಪಡಿಸುವುದು, ಯಂತ್ರಗಳ ಸಹಾಯದಿಂದ ಮಿಡತೆ ಬರುವ ದಿಕ್ಕಿನೆಡೆಗೆ ಜ್ವಾಲೆ ಎಸೆಯುವುದು, ಟ್ರಾಕ್ಟರ್‌‌ ಮೌಂಟೆಡ್‌‌‌‌‌ ಜೆಟ್‌‌ ಸ್ಪ್ರೇಯರ್‌‌‌‌‌‌‌‌ ಕೀಟನಾಶಕವನ್ನು ಬಳಸಬಹುದು ಎಂದು ತಿಳಿಸಿದ್ದಾರೆ.

More from the blog

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ..

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌ ಲಸಿಕೆ...

ಸರಪಾಡಿ : 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚೇತನ್ ಬಜ ಆಯ್ಕೆ..

ಬಂಟ್ವಾಳ : ಶರಭೇಶ್ವರ ದೇವಸ್ಥಾನ ಸರಪಾಡಿ ಇದರ 34ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ 3ನೇ ಬಾರಿ ಚೇತನ್ ಬಜ ಆಯ್ಕೆಯಾಗಿದ್ದಾರೆ.    

ಸೌಹಾರ್ದ ಬದುಕು ಕಟ್ಟೋಣ : ಡಾ.ಎನ್.ಇಸ್ಮಾಯಿಲ್..

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್...

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...