ಬೆಳ್ತಂಗಡಿ: ಬೆಳ್ತಂಗಡಿಯ ತಹಶಿಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಸರಕಾರದ ಆದೇಶದ ಪ್ರಕಾರ ಚಾಮರಾಜನಗರಕ್ಕೆ ವರ್ಗಾವಣೆ ಮಾಡಲಾಯಿತು. ನೂತನ ತಹಶಿಲ್ದಾರರಾಗಿ ಚಾಮರಾಜನಗರದಲ್ಲಿ ಕಾರ್ಯನಿರ್ವಹಿಸುತಿದ್ದ ಮಹೇಶ್ ಜೆ. ಅವರನ್ನು ನೇಮಕ ಮಾಡಲಾಗಿದೆ.


ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತರಾದ ಬಳಿಕ ತಹಶಿಲ್ದಾರರಾಗಿ ನೇಮಕಗೊಂಡಿದ್ದ ಇವರು ತಾಲೂಕಿನ ಅಕ್ರಮ ಗಣಿಗಾರಿಕೆ ಬ್ರೇಕ್ ಹಾಕಿದ್ದರು. ಬೆಳ್ತಂಗಡಿಯಲ್ಲಿ ಪ್ರವಾಹ ಬಂದಂತಹ ಸಂದರ್ಭದಲ್ಲಿ ಸಾಮಾನ್ಯರಂತೆ ಕೆಲಸ ಮಾಡಿದ್ದರು. ತಾಲೂಕು ಚುನಾವಣೆ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಅಗಿದ್ದರೂ ಸಾಮಾನ್ಯ ನೌಕರನಂತೆ ಮತ ಪೆಟ್ಟಿಗೆಯನ್ನು ಹೊತ್ತು ಭದ್ರತಾ ಕೇಂದ್ರಕ್ಕೆ ತಲುಪಿಸಿದ್ದರು. ಈಗ ಚಾಮರಾಜನಗರಕ್ಕೆ ಸರಕಾರದ ಆದೇಶದಂತೆ ವರ್ಗಾವಣೆಗೊಂಡಿರುವರು.

