Saturday, July 12, 2025

ಎ.20ರ ಬಳಿಕ ಕೂಲಿ ಕಾರ್ಮಿಕರಿಗೆ ಟಾಸ್ಕ್ ಪೋರ್ಸ್ ಮೂಲಕ ಉದ್ಯೋಗಕ್ಕೆ ಕ್ರಮ

ಬೆಳ್ತಂಗಡಿ: ಕೃಷಿ ಚಟುವಟಿಕೆಗಳನ್ನು ಈ ಭಾರಿಯ ಲಾಕ್‍ಡೌನಿನ ನಿಷೇದಾಜ್ಞೆಯಿಂದ ಹೊರಗಿಡಲಾಗಿದೆ. ಇದರೊಂದಿಗೆಎಪ್ರಿಲ್ 20ರ ನಂತರ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕಟ್ಟಡ, ರಸ್ತೆ, ಸೇತುವೆ ಮುಂತಾದ ನಿರ್ಮಾಣ ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಇದರೊಂದಿಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಪೋರ್ಸ್‍ ಮೂಲಕ ಗ್ರಾಮಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ಸದಸ್ಯರಿಗೂ ಉದ್ಯೋಗ ಸಿಗುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಬೆಳ್ತಂಗಡಿಯ ತಹಶೀಲ್ದಾರ್ ಗಣಪತಿ ಶಾಸ್ತ್ರಿ ತಿಳಿಸಿದ್ದಾರೆ.
ಟಾಸ್ಕ್ ಪೋರ್ಸ್‍ ಸದಸ್ಯರು ಗ್ರಾಮಗಳಲ್ಲಿರುವ ಕೂಲಿ ಕಾರ್ಮಿಕರನ್ನು ಗುರುತಿಸಿ, ಅವರಿಗೆ ಸೂಕ್ತ ಕೆಲಸ ದೊರಕಿಸಿ ಕೊಡಲು ತೋಟದ ಮಾಲೀಕರು ಹಾಗೂ ಕಾಮಗಾರಿಗಳ ಗುತ್ತಿಗೆದಾರರೊಂದಿಗೆ ಸಮನ್ವಯ ಸಾಧಿಸಲು ಸೂಚಿಸಲಾಗಿದೆ. ಅಂತೆಯೇ ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚು ಹೆಚ್ಚು ಜನರಿಗೆ ಉದ್ಯೋಗ ದೊರಕಿಸಿ, ಇದರ ಸವಲತ್ತುಗಳನ್ನು ಪಡೆದುಕೊಳ್ಳಲು ಉತ್ತೇಜನ ನೀಡಬೇಕು ಎಂದು ವಿವರಿಸಿರುವ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಈ ಎಲ್ಲ ಸಂದರ್ಭಗಳಲ್ಲಿ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...