Thursday, July 10, 2025

ಬೆಳ್ತಂಗಡಿ ತಾಲೂಕನ್ನು ಗ್ರೀನ್ ಝೋನ್ ಎಂದು ಘೋಷಣೆ

ಬೆಳ್ತಂಗಡಿ: ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕನ್ನು ಗ್ರೀನ್ ಝೋನ್ ಎಂದು ಘೋಷಿಸಲಾಗಿದೆ. ಕೊವೀಡ್-19 ಕೇಸ್ ದಾಖಾಲಾಗಿರುವುದನ್ನು ಆಧರಿಸಿಕೊಂಡು ರಾಜ್ಯ ಸರ್ಕಾರ ಜಿಲ್ಲೆ ಹಾಗೂ ತಾಲೂಕುಗಳನ್ನು 4 ಬಣ್ಣಗಳಲ್ಲಿ ವಿಂಗಡಿಸಲಾಗಿದ್ದು, ಹಲವು ದಿನಗಳಿಂದ ಕೊವೀಡ್ ಕೇಸ್ ಪತ್ತೆಯಾಗದ ಹಿನ್ನೆಲೆ ಬೆಳ್ತಂಗಡಿ ತಾಲೂಕನ್ನು ಗ್ರೀನ್ ಝೋನ್ ಎಂದು ಗುರುತಿಸಲಾಗಿದೆ.

ದ.ಕ. ಜಿಲ್ಲೆಯ ಹಲವು ತಾಲೂಕುಗಳಲ್ಲಿ ಕೊರೋನಾ ಕೇಸ್ ಇರುವುದನ್ನು ಗುರುತಿಸಿ ಈ ಜಿಲ್ಲೆಯ ಎಲ್ಲಾ ತಾಲೂಕನ್ನು ವಿವಿಧ ಝೋನ್ ಗಳಾಗಿ ವಿಂಗಡಿಸಲಾಗಿತ್ತು. ಅದರಂತೆ ಬೆಳ್ತಂಗಡಿ ತಾಲೂಕಿನಲ್ಲಿ ಕೇಸ್ ಪತ್ತೆಯಾಗದ ಕಾರಣ ಆರೆಂಜ್ ಝೋನ್ ಎಂದು ಘೋಷಿಸಿದೆ.
ಉಳಿದಂತೆ ಮಂಗಳೂರು, ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳನ್ನು ಆರೆಂಜ್ ಝೋನ್ ಎಂದು ಗುರುತಿಸಿದೆ. ಬೆಳ್ತಂಗಡಿ, ಕಡಬ, ಉಳ್ಳಾಲ, ಮೂಡುಬಿದ್ರೆ, ಸುಳ್ಯ ತಾಲೂಕುಗಳಲ್ಲಿ ಯಾವುದೇ ಪ್ರಕರಣ ಇಲ್ಲದ ಹಿನ್ನೆಲೆ ಗ್ರೀನ್ ಝೋನ್ ಎನಿಸಿಕೊಂಡಿದೆ

 

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

Women missing : ವಿವಾಹಿತ ಮಹಿಳೆ ನಾಪತ್ತೆ – ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ: ಬಿಸಿರೋಡಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಅಚ್ಚರಕಟ್ಟೆ ನಿವಾಸಿ ವಸಂತ ನಾಗಣ್ಣ...

Government Hospital : ಸರಕಾರಿ ಆಸ್ಪತ್ರೆಯ ಆವರಣದೊಳಗೆ ಅನಧಿಕೃತವಾಗಿ ವಾಹನಗಳ ಪಾರ್ಕ್ – ರೋಗಿಗಳಿಗೆ ತೊಂದರೆ..

ಬಂಟ್ವಾಳ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಅವರಣದ ಒಳಗೆ ರಿಕ್ಷಾ ಸಹಿತ ಇತರೆ ವಾಹನಗಳನ್ನು ‌ಅನಧಿಕೃತವಾಗಿ ಪಾರ್ಕ್ ಮಾಡಲಾಗಿ ಹೋಗುತ್ತಾರೆ, ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಹಿತ ಅಂಬ್ಯುಲೆನ್ಸ್ ವಾಹನಗಳಿಗೆ ಸಂಚಾರಕ್ಕೆ ತೊಡಕುಂಟಾಗಿದೆ ಎಂಬ‌...