Monday, January 26, 2026

ಬಿ.ಎಸ್.ವೈ ನೇತೃತ್ವದಲ್ಲಿ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮ

ಬೆಂಗಳೂರು: ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೂತನ 10 ಸಚಿವರು ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ 10 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ 10 ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವಾರು ಸಚಿವರು, ಶಾಸಕರು ಭಾಗವಹಿಸಿದ್ದರು. ಆದರೆ ಬಿಜೆಪಿಯ ಕೆಲ ಸಚಿವರು ಶಾಸಕರು ಕಾರ್ಯಕ್ರಮಕ್ಕೆ ಆಗಮಿಸಿಲ್ಲ. ಡಿಸಿಎಂ ಸ್ಥಾನದ ಆಕಾಂಕ್ಷಿಗಳಾದ ಸಚಿವರಾದ ಶ್ರೀರಾಮುಲು, ಹಾಗೂ ಕೆ. ಎಸ್. ಈಶ್ವರಪ್ಪ ಕೂಡಾ ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಸಚಿವ ಸ್ಥಾನದ ಆಕಾಂಕ್ಷಿಗಳಾದ ಉಮೇಶ್ ಕತ್ತಿ, ಸಿ.ಪಿ ಯೋಗೇಶ್ವರ್, ಹಾಗೂ ಎಂ. ಟಿ. ಬಿ. ನಾಗರಾಜ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.

ಉಪಚುನಾವಣೆಯಲ್ಲಿ ಸೋಲನುಭವಿಸಿದ್ದ ಎಚ್.ವಿಶ್ವನಾಥ್ ಮತ್ತು ಮಾಜಿ ಸಚಿವ ಆರ್. ಶಂಕರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನೂತನ ಸಚಿವರಿಗೆ ಶುಭ ಹಾರೈಸಿದರು.
ಗೋಕಾಕ್ ಶಾಸಕ ರಮೇಶ್‌ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್‌ ಸಿಂಗ್‌, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್‌, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌, ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ, ಚಿಕ್ಕಬಳ್ಳಾಪುರ ಶಾಸಕ ಡಾ| ಕೆ. ಸುಧಾಕರ್‌, ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಅವರು ಬಿಎಸ್ ವೈ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ.

ಎಂಟು ಶಾಸಕರು ಮೊದಲ ಸಲ ಆಯ್ಕೆ

ಗೋಕಾಕ್ ಶಾಸಕ ರಮೇಶ್‌ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಸಣ್ಣ ಕೈಗಾರಿಕೆ ಸಚಿವರಾಗಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆನಂದಸಿಂಗ್‌ ಅವರು ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಪ್ರವಾಸೋದ್ಯಮ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮೈತ್ರಿ ಸರ್ಕಾರ ಅವಧಿಯಲ್ಲಿ ಎಸ್‌.ಟಿ.ಸೋಮಶೇಖರ್‌ ಬಿಡಿಎ ಅಧ್ಯಕ್ಷರಾಗಿ, ಡಾ.ಕೆ.ಸುಧಾಕರ್‌ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಹಾಗೂ ಬೈರತಿ ಬಸವರಾಜು ಅವರು ಕರ್ನಾಟಕ ಸೋಪು ಮತ್ತು ಮಾರ್ಜಕ ಲಿಮಿಟೆಡ್‌ ಅಧ್ಯಕ್ಷರಾಗಿ ಅಲ್ಪ ಕಾಲ ಕಾರ್ಯನಿರ್ವಹಿಸಿದ್ದರು. ಇವರ ಜತೆಗೆ ನಾರಾಯಣಗೌಡ, ಬಿ.ಸಿ.ಪಾಟೀಲ್‌, ಶ್ರೀಮಂತ ಪಾಟೀಲ್‌, ಶಿವರಾಂ ಹೆಬ್ಬಾರ್‌ ಮತ್ತು ಗೋಪಾಲಯ್ಯ ಅವರು ಮೊದಲ ಬಾರಿಗೆ ಸಚಿವ ಭಾಗ್ಯ ಪಡೆದುಕೊಂಡಿದ್ದಾರೆ.
ಈ ಹತ್ತು ಶಾಸಕರು 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...