Tuesday, July 15, 2025

ಹೃದಯ – ಆರೋಗ್ಯ ಅರಿವು 2019-20

ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಬೆಂಜನಪದವು ಇಲ್ಲಿ ರೋಟಾರಿ ಕ್ಲಬ್ ಬಂಟ್ವಾಳ ಮತ್ತು ಇಂಟರ್ಯಾಕ್ಟ್ ಕ್ಲಬ್ ಬೆಂಜನಪದವು ಸಹಯೋಗದೊಂದಿಗೆ ಹೃದಯ -ಆರೋಗ್ಯ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಡಾಕ್ಟರ್ ಸೌಮ್ಯ ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು, ಹೃದಯ ಸ್ಥಂಭನ ಆದಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿ ಮಾದರಿಗಳ ಸಹಾಯದಿಂದ ಪ್ರಾಯೋಗಿಕವಾಗಿ ಅನುಸರಿಸಬೇಕಾದ ಪ್ರಥಮ ಚಿಕಿತ್ಸಾ ಕ್ರಮಗಳ ಬಗ್ಗೆ ತಿಳಿಸಿದರು. ಡಾಕ್ಟರ್ ನಾಗಾರ್ಜುನ್ ಚಿಕ್ಕ ಮಕ್ಕಳಿಂದ ಆರಂಭಗೊಂಡು 60 ವರ್ಷ ಮೇಲ್ಪಟ್ಟವರಿಗೆ ಮಾಡುವ ಚಿಕಿತ್ಸಾ ವಿಧಾನಗಳ ಭಿನ್ನತೆಯನ್ನು ತಿಳಿಸಿ ಪ್ರತಿ ವಿದ್ಯಾರ್ಥಿಗಳಿಗೆ ಮಾದರಿಗಳನ್ನು ನೀಡಿ ಪ್ರಾಯೋಗಿಕವಾಗಿ ಚಿಕಿತ್ಸಾ ವಿಧಾನವನ್ನು ಮಾಡಿಸಿದರು.
ಇಂಟರ್ಯಾಕ್ಟ್ ನೋಡಲ್ ಶಿಕ್ಷಕಿ ಹೇಮಾ ಕೆ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಕಲಾ ಶಿಕ್ಷಕ ಮಹಮ್ಮದ್ ಇಕ್ಬಾಲ್ ವಂದಿಸಿದರು.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...