Thursday, February 13, 2025

ಬೆಂಜನಪದವು ನೂತನ ‘ಪಶು ಚಿಕಿತ್ಸಾಲಯ’ ಕಟ್ಟಡ ಉದ್ಘಾಟನೆ

ಬಂಟ್ವಾಳ:  ಸಾಮಾನ್ಯವಾಗಿ ಹಳ್ಳಿಗಳಲ್ಲಿ ಪಶುಸಂಗೋಪನೆ ಎಂಬುದು ರೈತರ ಇನ್ನೊಂದು ಭಾಗ. ನಾನು ಕೂಡ ಒಬ್ಬ ರೈತನಾಗಿದ್ದು, ನನ್ನಲ್ಲಿ 150ಕ್ಕೂ ಮಿಕ್ಕ ಪಶುಗಳಿವೆ. ಹಾಗಾಗಿ ಅವುಗಳ ಅಗತ್ಯ ಮತ್ತು ಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಇದು 2015-16ರಲ್ಲಿ ಮಂಜೂರಾತಿ ಪಡೆದಿತ್ತು. ಗುಡ್ಡಪ್ರದೇಶದಲ್ಲಿರುವ ಈ ಕೇಂದ್ರ ಜನರಿಗೆ ದೂರವಾದರೂ ಹೆಚ್ಚು ಅನುಕೂಲಕರವಾಗಲಿದೆ ಎಂಬುದು ನನ್ನ ಭಾವನೆ ಎಂದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ದಕ ಜಿಪಂ(ಮಂಗಳೂರು), ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ(ಬಂಟ್ವಾಳ) ಹಾಗೂ ದಕ ನಿರ್ಮಿತಿ ಕೇಂದ್ರ(ಸುರತ್ಕಲ್) ಇವರ ಜಂಟಿ ಆಶ್ರಯದಲ್ಲಿ ಆರೈಡಿಎಫ್ 21 ಯೋಜನೆಯಡಿ ಬೆಂಜನಪದವಿನಲ್ಲಿ ನಿರ್ಮಿಸಲಾದ ನೂತನ ‘ಪಶು ಚಿಕಿತ್ಸಾಲಯ’ ಕಟ್ಟಡ ಉದ್ಘಾಟಿಸಿ ಶಾಸಕರು ಮಾತನಾಡಿದರು.
ಅಮ್ಮುಂಜೆ ಪಂಚಾಯತ್ ಅಧ್ಯಕ್ಷೆ ಪ್ರೇಮಲತಾ ಎಲ್ ಪೂಜಾರಿ ಮಾತನಾಡುತ್ತ, ಇದು ನಮ್ಮ ಬಹುಕಾಲದ ಬೇಡಿಕೆಯಾಗಿದ್ದು, ಇಂದು ಲೋಕಾರ್ಪಣೆಗೊಂಡಿದೆ. ಮಾಜಿ ಸಚಿವ ರಮಾನಾಥ ರೈ ಪ್ರಯತ್ನದ ಫಲ ಇದಾಗಿದೆ. ಇದು ಈ ಭಾಗದ ರೈತರಿಗೆ ಹೆಚ್ಚು ಅನುಕೂಲಕರವಾಗಲಿದೆ ಎಂದರು.
ಶಾಸಕರು ಹೇಳಿದಂತೆ ಇದು ಹೆಚ್ಚು ರೈತರು ಇರುವ ಪ್ರದೇಶ. ಹಾಗಾಗಿ ಈ ರೈತರಿಗೆ ಪೂರಕವಾದ ಪಶು ಸಂಗೋಪನೆಗೆ ಪಶು ವೈದ್ಯಕೀಯ ಆಸ್ಪತ್ರೆಗಳು ಅತಿ ಅವಶ್ಯ. ಇದರಲ್ಲಿ ಅತ್ಯುತ್ತಮ ಸೌಕರ್ಯಗಳಿದ್ದರೆ ವೈದ್ಯರಿಂದ ಉತ್ತಮ ಸೇವೆ ನೀಡಲು ಸಾಧ್ಯವಿದೆ ಎಂದು ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ಎಸ್ ಮೋಹನ್ ಹೇಳಿದರು.ಎಚ್ ಆರ್ ಲಾಸ್ರದೋ ಸ್ವಾಗತಿಸಿದರು.ಯೋಜನಾ ನಿರ್ದೇಶಕರು ರಾಜೇಂದ್ರ ಕಲ್ಬಾವಿ, ಅಮ್ಮುಂಜೆ ಪಂ.ಉಪಾಧ್ಯಕ್ಷ ವಾಮನ ಆಚಾರ್ಯ, ಚಂದ್ರಶೇಖರ ಭಂಡಾರಿ, ಉಮೇಶ್ ಶೆಟ್ಟಿ, ಕಾರ್ತಿಕ್ ಬಲ್ಲಾಳ್ ಉಪಸ್ಥಿತರಿದ್ದರು.

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...