Friday, July 11, 2025

ಬೆಂಜನಪದವು ನೂತನ ‘ಪಶು ಚಿಕಿತ್ಸಾಲಯ’ ಕಟ್ಟಡ ಉದ್ಘಾಟನೆ

ಬಂಟ್ವಾಳ:  ಸಾಮಾನ್ಯವಾಗಿ ಹಳ್ಳಿಗಳಲ್ಲಿ ಪಶುಸಂಗೋಪನೆ ಎಂಬುದು ರೈತರ ಇನ್ನೊಂದು ಭಾಗ. ನಾನು ಕೂಡ ಒಬ್ಬ ರೈತನಾಗಿದ್ದು, ನನ್ನಲ್ಲಿ 150ಕ್ಕೂ ಮಿಕ್ಕ ಪಶುಗಳಿವೆ. ಹಾಗಾಗಿ ಅವುಗಳ ಅಗತ್ಯ ಮತ್ತು ಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಇದು 2015-16ರಲ್ಲಿ ಮಂಜೂರಾತಿ ಪಡೆದಿತ್ತು. ಗುಡ್ಡಪ್ರದೇಶದಲ್ಲಿರುವ ಈ ಕೇಂದ್ರ ಜನರಿಗೆ ದೂರವಾದರೂ ಹೆಚ್ಚು ಅನುಕೂಲಕರವಾಗಲಿದೆ ಎಂಬುದು ನನ್ನ ಭಾವನೆ ಎಂದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ದಕ ಜಿಪಂ(ಮಂಗಳೂರು), ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ(ಬಂಟ್ವಾಳ) ಹಾಗೂ ದಕ ನಿರ್ಮಿತಿ ಕೇಂದ್ರ(ಸುರತ್ಕಲ್) ಇವರ ಜಂಟಿ ಆಶ್ರಯದಲ್ಲಿ ಆರೈಡಿಎಫ್ 21 ಯೋಜನೆಯಡಿ ಬೆಂಜನಪದವಿನಲ್ಲಿ ನಿರ್ಮಿಸಲಾದ ನೂತನ ‘ಪಶು ಚಿಕಿತ್ಸಾಲಯ’ ಕಟ್ಟಡ ಉದ್ಘಾಟಿಸಿ ಶಾಸಕರು ಮಾತನಾಡಿದರು.
ಅಮ್ಮುಂಜೆ ಪಂಚಾಯತ್ ಅಧ್ಯಕ್ಷೆ ಪ್ರೇಮಲತಾ ಎಲ್ ಪೂಜಾರಿ ಮಾತನಾಡುತ್ತ, ಇದು ನಮ್ಮ ಬಹುಕಾಲದ ಬೇಡಿಕೆಯಾಗಿದ್ದು, ಇಂದು ಲೋಕಾರ್ಪಣೆಗೊಂಡಿದೆ. ಮಾಜಿ ಸಚಿವ ರಮಾನಾಥ ರೈ ಪ್ರಯತ್ನದ ಫಲ ಇದಾಗಿದೆ. ಇದು ಈ ಭಾಗದ ರೈತರಿಗೆ ಹೆಚ್ಚು ಅನುಕೂಲಕರವಾಗಲಿದೆ ಎಂದರು.
ಶಾಸಕರು ಹೇಳಿದಂತೆ ಇದು ಹೆಚ್ಚು ರೈತರು ಇರುವ ಪ್ರದೇಶ. ಹಾಗಾಗಿ ಈ ರೈತರಿಗೆ ಪೂರಕವಾದ ಪಶು ಸಂಗೋಪನೆಗೆ ಪಶು ವೈದ್ಯಕೀಯ ಆಸ್ಪತ್ರೆಗಳು ಅತಿ ಅವಶ್ಯ. ಇದರಲ್ಲಿ ಅತ್ಯುತ್ತಮ ಸೌಕರ್ಯಗಳಿದ್ದರೆ ವೈದ್ಯರಿಂದ ಉತ್ತಮ ಸೇವೆ ನೀಡಲು ಸಾಧ್ಯವಿದೆ ಎಂದು ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ಎಸ್ ಮೋಹನ್ ಹೇಳಿದರು.ಎಚ್ ಆರ್ ಲಾಸ್ರದೋ ಸ್ವಾಗತಿಸಿದರು.ಯೋಜನಾ ನಿರ್ದೇಶಕರು ರಾಜೇಂದ್ರ ಕಲ್ಬಾವಿ, ಅಮ್ಮುಂಜೆ ಪಂ.ಉಪಾಧ್ಯಕ್ಷ ವಾಮನ ಆಚಾರ್ಯ, ಚಂದ್ರಶೇಖರ ಭಂಡಾರಿ, ಉಮೇಶ್ ಶೆಟ್ಟಿ, ಕಾರ್ತಿಕ್ ಬಲ್ಲಾಳ್ ಉಪಸ್ಥಿತರಿದ್ದರು.

More from the blog

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...