Thursday, January 29, 2026

ವೀರಕಂಭ ರಕ್ಷಿತ ಅರಣ್ಯಕ್ಕೆ ಬೆಂಕಿ

ಬಂಟ್ವಾಳ: ವೀರಕಂಭ ರಕ್ಷಿತ ಅರಣ್ಯಕ್ಕೆ ಇಂದು ಮಧ್ಯಾಹ್ನದ ವೇಳೆ ಬೆಂಕಿ ಬಿದ್ದು ಕಾಡು ನಾಶವಾಗಿದೆ. ವೀರಕಂಭ ರಕ್ಷಿತ ಅರಣ್ಯದ
ಕೆಲಿಂಜದಲ್ಲಿ ಕಾಡಿಗೆ ಬೆಂಕಿ ಬಿದ್ದು ಕಾಡು ಸಂಪತ್ತು ಬೆಂಕಿಗೆ ಅಹುತಿಯಾಗಿದೆ.


ಸ್ಥಳ ಕ್ಕೆ ಬಂಟ್ವಾಳ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರೀತಮ್ ಮತ್ತು ಯಶೋಧರ ಅರಣ್ಯ ರಕ್ಷಕರಾದ ದಯಾನಂದ, ಜೀತೇಶ್, ರವಿ, ಖ್ಯಾತಲಿಂಗ, ರೇಖಾ, ಅರಣ್ಯ ವೀಕ್ಷಕರಾದ ಪ್ರವೀಣ, ಜಯರಾಮ, ಮತ್ತು ಚಾಲಕ ಜಯರಾಮ ಹಾಗೂ ಸಾರ್ವಜನಿಕರು ಬೆಂಕಿ ನಂದಿಸಲು ಸಹಕರಿಸಿದರು. ಆಕಸ್ಮಿಕವಾಗಿ ಕಾಡಿಗೆ ಬೆಂಕಿ ಹತ್ತಿದೆಯಾ ಅಥವಾ ಯಾರಾದರೂ ಬೆಂಕಿ ಹಚ್ಚಿದ್ದರಾ ಎನ್ನುವುದು ಇನ್ನಷ್ಟೆ ತಿಳಿಯಬೇಕಾಗಿದೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...